ADVERTISEMENT

ಉಮೇಶ್ ಕತ್ತಿ ಹೇಳಿಕೆಗೆ ಮುಖ್ಯಮಂತ್ರಿ ಯಡಿಯೂರಪ್ಪ ವಿಷಾದ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 10:35 IST
Last Updated 28 ಏಪ್ರಿಲ್ 2021, 10:35 IST
 ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಮಂತ್ರಿ ಯಡಿಯೂರಪ್ಪ   

ಬೆಂಗಳೂರು: ಆಹಾರ ಮತ್ತು ನಾಗರಿಕ ಖಾತೆ ಸಚಿವ ಉಮೇಶ್ ಕತ್ತಿಅವರಿಗೆ ಕರೆ ಮಾಡಿದ್ದ ರೈತನೊಬ್ಬ 5 ಕೆ.ಜಿ ಅಕ್ಕಿ ಬದಲಾಗಿ 3 ಕೆ.ಜಿ ನೀಡುತ್ತಿರುವುದು ಏಕೆ? ಸಾಯಬೇಕಾ ಬದುಕಬೇಕಾ.. ಎಂದು ಕೇಳಿದಾಗ ಸಾಯಿ ಅಂತ ಹೇಳಿರುವುದು ಒಬ್ಬ ಸಚಿವನಾಗಿ ಸರಿಯಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಆ ಭಾಗದಲ್ಲಿರುವ ಜನರಿಗೆ ಗೋಧಿ ಬೇಡವಾದರೆ 5 ಕೆ.ಜಿ ಅಕ್ಕಿಯನ್ನು ಕೊಡಲು ವ್ಯವಸ್ಥೆ ಮಾಡಲಾಗುವುದು. ಉಮೇಶ್ ಕತ್ತಿ ಅವರ ಹೇಳಿಕೆಗೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.