ADVERTISEMENT

ಕೋವಿಡ್-19‌ ಲಸಿಕೆ ನಾಳೆ ಸಿಎಂಗಳ ಜತೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2020, 20:30 IST
Last Updated 22 ನವೆಂಬರ್ 2020, 20:30 IST
   

ಬೆಂಗಳೂರು: ಕೋವಿಡ್‌ ಲಸಿಕೆ ವಿತರಣೆ ಕುರಿತು ಇದೇ 24 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ವರ್ಚುವಲ್‌ ಸಂವಾದ ನಡೆಸಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೂ ಭಾಗವಹಿಸಲಿದ್ದಾರೆ.

ಅಂದು 12 ಗಂಟೆಗೆ ಸಭೆ ನಡೆಯಲಿದ್ದು, ಅದರಲ್ಲಿ ಭಾಗವಹಿಸುವಂತೆ ಮುಖ್ಯಮಂತ್ರಿಯವರಿಗೆ ಸೂಚನೆ ಬಂದಿದೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ.

ಕೋವಿಡ್‌ ಲಸಿಕೆ ಸಿದ್ಧವಾದಾಗ ಅದನ್ನು ದೇಶವ್ಯಾಪಿ ವ್ಯವಸ್ಥಿತವಾಗಿ ವಿತರಿಸಲು ಪ್ರಧಾನಿಯವರು ಈಗಿನಿಂದಲೇ ಸಿದ್ಧತೆ ನಡೆಸುವ ಸಂಬಂಧ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಚರ್ಚಿಸಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.