ADVERTISEMENT

ಕಾಂಗ್ರೆಸ್ ಮುಗಿಸುವುದು ಬಿಜೆಪಿ ಭ್ರಮೆ: ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2024, 17:33 IST
Last Updated 19 ಆಗಸ್ಟ್ 2024, 17:33 IST
<div class="paragraphs"><p>ಪತ್ರಿಕಾ ಛಾಯಾಗ್ರಾಹಕರ ಸಂಘ ಏರ್ಪಡಿಸಿದ್ದ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಛಾಯಾಚಿತ್ರವನ್ನು ಕ್ಲಿಕ್ಕಿಸಿದರು.</p></div>

ಪತ್ರಿಕಾ ಛಾಯಾಗ್ರಾಹಕರ ಸಂಘ ಏರ್ಪಡಿಸಿದ್ದ ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಛಾಯಾಚಿತ್ರವನ್ನು ಕ್ಲಿಕ್ಕಿಸಿದರು.

   

ಬೆಂಗಳೂರು: ‘ನಾನು ಬಡಜನರ ಪರವಾಗಿ ಇರುವುದೇ ವಿರೋಧ ಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ನನ್ನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್‌ ಮುಗಿಸಬಹುದು ಎಂಬ ಭ್ರಮೆಯಲ್ಲಿ ಬಿಜೆಪಿಯವರಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಸೋಮವಾರ ಪತ್ರಿಕಾ ಛಾಯಾಗ್ರಾಹಕರ ಛಾಯಾಚಿತ್ರಗಳ ಪ್ರದರ್ಶನವನ್ನು ಉದ್ಘಾಟಿಸಿ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದ ಅವರು,  ‘ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಮಾಡಿಲ್ಲ’ ಎಂದರು.

ADVERTISEMENT

‘ರಾಜಭವನವನ್ನು ಬಳಸಿಕೊಂಡು ಬಿಜೆಪಿ, ಜೆಡಿಎಸ್‌ ಹಾಗೂ ಕೇಂದ್ರ ಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಮಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈ ಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದುರಿಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡು ಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ‘ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.