ಬೆಂಗಳೂರು: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಮದು ವರ್ಷದ ವೇತನವನ್ನು ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಹೇಳಿದ್ದಾರೆ.
ಒಂದು ವರ್ಷದ ವೇತನ ನೀಡುವುದಾಗಿ ವಿಡಿಯೊ ಹೇಳಿಕೆ ಮೂಲಕ ತಿಳಿಸಿದ್ದಾರೆ.
ಅದೇ ರೀತಿ ರಾಜ್ಯದ ಶಾಸಕರು, ಮಂತ್ರಿಗಳು, ಸಂಸದರು, ಅಧಿಕಾರಿಗಳು ತಮ್ಮ ಕೈಲಾದಷ್ಟು ಆರ್ಥಿಕ ಸಹಾಯ ಮಾಡುವಂತೆ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.
ಕೊರೊನಾ ವೈರಸ್ ವಿರುದ್ಧ ಹೋರಾಟದಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.