ADVERTISEMENT

ಚಿಕ್ಕಮಗಳೂರು | ಮೂವರಿಗೆ ಸೋಂಕು ಪತ್ತೆ: ಸಕ್ರಿಯ ಪ್ರಕರಣ 25

​ಪ್ರಜಾವಾಣಿ ವಾರ್ತೆ
Published 28 ಜೂನ್ 2020, 15:42 IST
Last Updated 28 ಜೂನ್ 2020, 15:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಭಾನುವಾರ ಮೂವರಿಗೆ ಕೋವಿಡ್‌–19 ದೃಢಪಟ್ಟಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆ 25ಕ್ಕೆ ಏರಿದೆ.
ಚಿಕ್ಕಮಗಳೂರಿನ ರಾಮನಹಳ್ಳಿಯ 44 ವರ್ಷದ ಪುರುಷ (ಪಿ–11946), ದೋಣಿಖಣದ 37 ವರ್ಷದ ಪುರುಷ (ಪಿ–11947) ಹಾಗೂ ತಾಲ್ಲೂಕಿನ ಮೂಗ್ತಿಹಳ್ಳಿಯ 35 ವರ್ಷದ ಪುರುಷಗೆ (ಪಿ–11945) ಸೋಂಕು ಪತ್ತೆಯಾಗಿದೆ.

ಮೂವರನ್ನೂ ಚಿಕ್ಕಮಗಳೂರಿನ ಕೋವಿಡ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಿ–11946ಮತ್ತು ಪಿ–11947 ಇಬ್ಬರೂ ಬೆಂಗಳೂರಿಗೆ ಹೋಗಿ ಬಂದವರು. ಪ್ರಾಥಮಿಕ ಸಂಪರ್ಕದಲ್ಲಿದ್ದವರ ಮಾಹಿತಿ ಕಲೆ ಹಾಕುತ್ತಿದ್ದೇವೆ, 10ಕ್ಕೂ ಹೆಚ್ಚು ಮಂದಿಯನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.