ADVERTISEMENT

ಶಿವಮೂರ್ತಿ ಮುರುಘಾ ಶರಣರ ಆರೋಗ್ಯ ಗಂಭೀರ: ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2022, 6:39 IST
Last Updated 2 ಸೆಪ್ಟೆಂಬರ್ 2022, 6:39 IST
   

ಚಿತ್ರದುರ್ಗ: ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿ ಚಿಕಿತ್ಸೆಗೆ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿರುವ ಶಿವಮೂರ್ತಿ ಮುರುಘಾ ಶರಣರನ್ನು ತೀವ್ರ ನಿಗಾ ಘಟಕ್ಕೆ ಸ್ಥಳಾಂತರಿಸಲಾಯಿತು.

ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಆರೋಗ್ಯ ಪರೀಕ್ಷೆಗಾಗಿ ತೀವ್ರನಿಗಾ ಘಟಕಕ್ಕೆ ಕರೆತಂದಿದ್ದಾರೆ. ಹೃದಯ ಪರೀಕ್ಷೆಯ ವರದಿ ಆಧರಿಸಿ ಚಿಕಿತ್ಸೆ ಬಗ್ಗೆ ವೈದ್ಯರು ನೀರ್ಧಾರ ಕೈಗೊಳ್ಳಲಿದ್ದಾರೆ.

ಜಿಲ್ಲಾ ಕಾರಾಗೃಹದಲ್ಲಿದ್ದ ಅವರ ಆರೋಗ್ಯದಲ್ಲಿ ಬೆಳಿಗ್ಗೆ 9ಕ್ಕೆ ಏರುಪೇರು ಕಾಣಿಸಿಕೊಂಡಿದೆ. ಎದೆನೋವಿನಿಂದ ಬಳಲುತ್ತಿದ್ದ ಅವರನ್ನು ಜಿಲ್ಲಾ ಆಸ್ಪತ್ರೆಗೆ ಬೆಳಿಗ್ಗೆ 9.30 ಕರೆತಂದು ಹೊರರೋಗಿ ಚಿಕಿತ್ಸಾ ಘಟಕದಲ್ಲಿ ತಪಾಸಣೆ ನಡೆಸಲಾಯಿತು.

ADVERTISEMENT

ವೈದ್ಯಾಧಿಕಾರಿ ಶಿವಕುಮಾರ, ವೈದ್ಯೆ ಲೀಲಾ ರಾಘವನ್ ಅವರ ಸಲಹೆ ಮೇರೆಗೆ ಸೀಟಿ ಸ್ಕ್ಯಾನ್, ಆಲ್ಟ್ರಾಸೌಂಡ್, ರಕ್ತ ಪರೀಕ್ಷೆ ಸೇರಿದಂತೆ ಇತರ ಪರೀಕ್ಷೆಗಳನ್ನು ನಡೆಸಲಾಗಿದೆ. ಹೃದಯ ಸಂಬಂಧಿ ಸಮಸ್ಯೆ ಪತ್ತೆಯಾಗಿದ್ದರಿಂದ ತಜ್ಞ ವೈದ್ಯರ ಸಲಹೆ ಪಡೆಯಲಾಗುತ್ತಿದೆ. ದಾವಣಗೆರೆಯಿಂದ ವೈದ್ಯರನ್ನು ಕರೆಸಲಾಗುತ್ತಿದೆ ಎಂಬ ಮಾಹಿತಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.