ADVERTISEMENT

ಬಿ.ಎಸ್‌.ಯಡಿಯೂರಪ್ಪಗೆ ಕ್ರೈಸ್ತ ಸಮುದಾಯದ ಬೆಂಬಲ

​ಪ್ರಜಾವಾಣಿ ವಾರ್ತೆ
Published 22 ಜುಲೈ 2021, 6:49 IST
Last Updated 22 ಜುಲೈ 2021, 6:49 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ವೀರಶೈವ–ಲಿಂಗಾಯತ ಮತ್ತು ಇತರ ಸಮುದಾಯ ಮಾತ್ರವಲ್ಲ ಕ್ರೈಸ್ತ ಪಾದ್ರಿಗಳು ಮತ್ತು ಅಖಿಲ ಭಾರತ ಕ್ರೈಸ್ತ ಮಹಾಸಭಾ ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಮುಂದಿನ ಅವಧಿಯವರೆಗೆ ಯಡಿಯೂರಪ್ಪ ಅವರನ್ನೇ ಮುಂದುವರಿಸಬೇಕು ಎಂದು ಮನವಿ ಪತ್ರವನ್ನು ಬಿಜೆಪಿ ವರಿಷ್ಠರಿಗೆ ಪತ್ರ ಕಳುಹಿಸುವುದಾಗಿ ಹೇಳಿದ್ದಾರೆ. ಕ್ರೈಸ್ತ ಮುಖಂಡರ ನಿಯೋಗವೊಂದು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಬೆಂಬಲ ವ್ಯಕ್ತಪಡಿಸಿದರು.

ಯಡಿಯೂರಪ್ಪ ಅವರು ಯಾವುದೇ ಧರ್ಮ, ಜಾತಿಗಳೆಂಬ ತಾರತಮ್ಯ ಮಾಡದೇ ಎಲ್ಲರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅದರಲ್ಲೂ ಕ್ರೈಸ್ತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ರಾಜ್ಯದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಕೊಡುಗೆ ದೊಡ್ಡದು ಎಂದು ಕ್ರೈಸ್ತ ಸಮುದಾಯದ ಮುಖಂಡರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.