ADVERTISEMENT

ಐವರಿಗೆ ‘ಚುಂಚಶ್ರೀ’ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2019, 19:54 IST
Last Updated 21 ಸೆಪ್ಟೆಂಬರ್ 2019, 19:54 IST

ನಾಗಮಂಗಲ (ಮಂಡ್ಯ ಜಿಲ್ಲೆ): ತಾಲ್ಲೂಕಿನ ಆದಿಚುಂಚನಗಿರಿ ಮಠ ನೀಡುವ, 2019ನೇ ಸಾಲಿನ ‘ಚುಂಚಶ್ರೀ’ ಪ್ರಶಸ್ತಿಗೆ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟ (ಸಾಹಿತ್ಯ), ಪ್ರೊ.ಟಿ.ಶಿವಣ್ಣ (ಶಿಕ್ಷಣ), ಡಾ. ರತ್ನರಾಜು (ವೈದ್ಯಕೀಯ), ಎಸ್.ಡಿ.ಈಶನ್ (ಕ್ರೀಡೆ), ರಾಮಚಂದ್ರ ಮ್ಹೆತ್ರೆ (ಧಾರ್ಮಿಕ) ಭಾಜನರಾಗಿದ್ದಾರೆ.

ಪ್ರಶಸ್ತಿಯು ₹50 ಸಾವಿರ ನಗದು ಮತ್ತು ಸ್ಮರಣಿಕೆಯನ್ನು ಒಳಗೊಂಡಿದೆ.

ಸೆ. 24ರಂದು ಮಠದಲ್ಲಿ ನಡೆಯುವ ಸಮಾರಂಭದಲ್ಲಿ, ಕಂದಾಯ ಸಚಿವ ಆರ್.ಅಶೋಕ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಆದಿಚುಂಚನಗಿರಿ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಕೆ. ಲೋಕೇಶ್ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.