ADVERTISEMENT

ಸಿಎಎ ವಿರುದ್ಧ ನಾಟಕ ಪ್ರದರ್ಶನ ಆರೋಪ: ಬಂಧಿತ ಮಹಿಳೆಯರಿಗೆ ಜಾಮೀನು ಮಂಜೂರು

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2020, 14:10 IST
Last Updated 14 ಫೆಬ್ರುವರಿ 2020, 14:10 IST
   

ಬೀದರ್‌: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ ಮಾಡಿದ್ದ ಆರೋಪದಲ್ಲಿ ಸೆರೆಯಾಗಿದ್ದ ಇಬ್ಬರು ಮಹಿಳೆಯರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ನೀಡಿದೆ.

ಕೇಂದ್ರ ಸರ್ಕಾರದ ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಕ್ಕಳು ಬೀದರ್‌ನ ಶಾಲೆಯೊಂದರಲ್ಲಿ ನಾಟಕ ಪ್ರದರ್ಶನ ಮಾಡಿದ್ದರು. ಆ ಸಂಬಂಧ ಮಕ್ಕಳ ತಾಯಿ ಮತ್ತು ಶಾಲೆಯ ಪ್ರಾಂಶುಪಾಲರನ್ನು ರಾಜದ್ರೋಹಪ್ರಕರಣದ ಅಡಿಯಲ್ಲಿಪೊಲೀಸರು ಬಂಧಿಸಿದ್ದರು.

ಈ ಘಟನೆ ದೇಶಾದ್ಯಂತ ಸುದ್ದಿ ಮಾಡಿದ್ದು, ಆಡಳಿತಾರೂಢ ಬಿಜೆಪಿ ಸರ್ಕಾರದ ನಡೆಯ ವಿರುದ್ಧ ಹಲವು ವಿರೋಧ ಪಕ್ಷಗಳ ನಾಯಕರು ಹರಿಹಾಯ್ದಿದ್ದರು.

ADVERTISEMENT

ನಾಟಕ ಪ್ರದರ್ಶನ ಮಾಡಿದ ಮಕ್ಕಳನ್ನು ಠಾಣೆಗೆ ಕರೆದೊಯ್ದಿದ್ದ ಪೊಲೀಸರ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ನಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.