ಬೀದರ್: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಾಟಕ ಪ್ರದರ್ಶನ ಮಾಡಿದ್ದ ಆರೋಪದಲ್ಲಿ ಸೆರೆಯಾಗಿದ್ದ ಇಬ್ಬರು ಮಹಿಳೆಯರಿಗೆ ಜಿಲ್ಲಾ ನ್ಯಾಯಾಲಯವು ಜಾಮೀನು ನೀಡಿದೆ.
ಕೇಂದ್ರ ಸರ್ಕಾರದ ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಮಕ್ಕಳು ಬೀದರ್ನ ಶಾಲೆಯೊಂದರಲ್ಲಿ ನಾಟಕ ಪ್ರದರ್ಶನ ಮಾಡಿದ್ದರು. ಆ ಸಂಬಂಧ ಮಕ್ಕಳ ತಾಯಿ ಮತ್ತು ಶಾಲೆಯ ಪ್ರಾಂಶುಪಾಲರನ್ನು ರಾಜದ್ರೋಹಪ್ರಕರಣದ ಅಡಿಯಲ್ಲಿಪೊಲೀಸರು ಬಂಧಿಸಿದ್ದರು.
ಈ ಘಟನೆ ದೇಶಾದ್ಯಂತ ಸುದ್ದಿ ಮಾಡಿದ್ದು, ಆಡಳಿತಾರೂಢ ಬಿಜೆಪಿ ಸರ್ಕಾರದ ನಡೆಯ ವಿರುದ್ಧ ಹಲವು ವಿರೋಧ ಪಕ್ಷಗಳ ನಾಯಕರು ಹರಿಹಾಯ್ದಿದ್ದರು.
ನಾಟಕ ಪ್ರದರ್ಶನ ಮಾಡಿದ ಮಕ್ಕಳನ್ನು ಠಾಣೆಗೆ ಕರೆದೊಯ್ದಿದ್ದ ಪೊಲೀಸರ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ನಡೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.