ಹಳೇಬೀಡು: ‘ಪೌರತ್ವ (ತಿದ್ದುಪಡಿ)ಕಾಯ್ದೆಯಿಂದ, ಭಾರತದ ನಾಗರಿಕರಾಗಿರುವ ಮುಸ್ಲಿಮರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಅವರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಜಾತಿಭೇದವಿಲ್ಲದೆ ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಸಾಗಿಸಬಹುದು' ಎಂದು ಸಿರಿಗೆರೆ ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಶುಕ್ರವಾರ ಇಲ್ಲಿ ಹೇಳಿದರು.
‘ದೇಶದ ಭದ್ರತೆಯ ದೃಷ್ಟಿಯಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಕೈಗೊಳ್ಳುವ ಕೆಲಸಗಳಿಗೆ ಜಾತಿ, ಧರ್ಮದ ಬಣ್ಣ ಕಟ್ಟಬಾರದು. ಸಣ್ಣ ಕಿಡಿ ಶಾಂತಿಯನ್ನು ಕದಡುತ್ತದೆ. ಮುಸ್ಲಿಮರು ಯಾರ ಮಾತಿಗೂ ಕಿವಿಗೊಡಬಾರದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.