ADVERTISEMENT

ನಟ ಸುದೀಪ್ ಟ್ವೀಟ್ ಬೆನ್ನಲ್ಲೇ ವಾಲ್ಮೀಕಿ ಜಾತ್ರೆಗೆ ಆಹ್ವಾನಿಸಿದ್ದ ಫೋಟೊ ಹರಿದಾಟ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಫೆಬ್ರುವರಿ 2023, 9:54 IST
Last Updated 10 ಫೆಬ್ರುವರಿ 2023, 9:54 IST
ಪ್ರಸನ್ನಾನಂದಪುರಿ ಸ್ವಾಮೀಜಿ ಮತ್ತು ನಟ ಕಿಚ್ಚ ಸುದೀಪ್ ಅವರ ತಂದೆ ಸಂಜೀವ್ (ಟ್ವಿಟರ್ ಚಿತ್ರ)
ಪ್ರಸನ್ನಾನಂದಪುರಿ ಸ್ವಾಮೀಜಿ ಮತ್ತು ನಟ ಕಿಚ್ಚ ಸುದೀಪ್ ಅವರ ತಂದೆ ಸಂಜೀವ್ (ಟ್ವಿಟರ್ ಚಿತ್ರ)   

ಬೆಂಗಳೂರು: ವಾಲ್ಮೀಕಿ ಜಾತ್ರೆಗೆ ಬರುವಂತೆ ನಟ ಕಿಚ್ಚ ಸುದೀಪ್ ಅವರಿಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನಿಸಿದ್ದ ಫೋಟೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

ಸುದೀಪ್ ಅವರು ಮನೆಯಲ್ಲಿ ಇಲ್ಲದ ಕಾರಣ ಅವರ ತಂದೆ ಸಂಜೀವ್ ಅವರಿಗೆ ಪ್ರಸನ್ನಾನಂದಪುರಿ ಸ್ವಾಮೀಜಿ ಆಹ್ವಾನ ಪತ್ರಿಕೆ ನೀಡಿದ್ದರು ಎನ್ನಲಾಗಿದೆ.

'ಪ್ರಸನ್ನಾನಂದಪುರಿ ಸ್ವಾಮೀಜಿ ಹಾಗೂ ಜಗಳೂರಿನ ಶಾಸಕ ಎಸ್ ವಿ.ರಾಮಚಂದ್ರಪ್ಪ ಅವರು ಸುದೀಪ್ ಅವರ ಮನೆಗೆ ಭೇಟಿ ನೀಡಿದ್ದರು. ಸುದೀಪ್ ಅವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ಅವರ ತಂದೆಯವರಿಗೆ ಆಹ್ವಾನ ಪತ್ರಿಕೆ ನೀಡಲಾಗಿತ್ತು’ ಎಂದು ಕೆ.ಎಂ. ರಂಗನಾಥ್ ಟ್ವೀಟ್ ಮಾಡಿದ್ದಾರೆ.

ADVERTISEMENT

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ಅಂಗವಾಗಿ ಗುರುವಾರ ಸಂಜೆ ನಡೆದ ಸಮಾರಂಭಕ್ಕೆ ನಟ ಕಿಚ್ಚ ಸುದೀಪ್‌ ಗೈರಾಗಿದ್ದರಿಂದ ಬೇಸರಗೊಂಡ ಅಭಿಮಾನಿಗಳು ವೇದಿಕೆ ಮುಂಭಾಗದ ಕುರ್ಚಿಗಳನ್ನು ಮುರಿದು ಆಕ್ರೋಶ ವ್ಯಕ್ತಪಡಿಸಿದ್ದರು. ವೇದಿಕೆ ಬಳಿ ಅಳವಡಿಸಿದ್ದ ಬ್ಯಾರಿಕೇಡ್‌ಗಳನ್ನು ನೆಲಕ್ಕುರುಳಿಸಿದ ಅಭಿಮಾನಿಗಳನ್ನು ನಿಯಂತ್ರಿಸಲು ಮುಂದಾದ ಪೊಲೀಸರ ಪೈಕಿ ಮೂವರು ಗಾಯಗೊಂಡಿದ್ದರು.

ಸುದೀಪ್ ಸ್ಪಷ್ಟನೆ
ದಾವಣಗೆರೆ ಜಿಲ್ಲೆಯ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ಅಂಗವಾಗಿ ಗುರುವಾರ ಸಂಜೆ ನಡೆದ ಸಮಾರಂಭಕ್ಕೆ ಗೈರಾಗಿದ್ದಕ್ಕೆ ನಟ ಕಿಚ್ಚ ಸುದೀಪ್ ಸ್ಪಷ್ಟನೆ ನೀಡಿದ್ದಾರೆ. ಕಾರ್ಯಕ್ರಮಕ್ಕೆ ಆಹ್ವಾನ ಇರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.