ಹಾಸನ: ಕೆ.ಆರ್.ಪೇಟೆ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನರಾಯಪಟ್ಟಣ ತಾಲೂಕಿನ ಕೆ.ಆರ್.ಪೇಟೆ ಗಡಿಭಾಗದ ನಂಬಿಹಳ್ಳಿಯಲ್ಲಿ ಮಧ್ಯ ರಾತ್ರಿ ಗಲಾಟೆ ನಡೆದಿದೆ.
ಡಾ.ಸೂರಜ್ ರೇವಣ್ಣ ಹಾಗೂ ಏಳು ಜನರ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು ಮಾಡಲಾಗಿದೆ.
ಘಟನೆಯಲ್ಲಿ ಎರಡು ಕಾರುಗಳು ಜಖಂ ಆಗಿದ್ದು, ಗಾಯಗೊಂಡಿರುವನಾಲ್ವರು ಜೆಡಿಎಸ್ನ ಕಾರ್ಯಕರ್ತರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚುನಾವಣೆ ಅಂಗವಾಗಿ ಸ್ಥಳೀಯರೊಬ್ಬರ ಮನೆಯಲ್ಲಿ ಉಳಿದು ಕೆ.ಆರ್.ಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಪರ ಹಣ ಹಂಚಿಕೆ ಮಾಡುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಜಗಳ ಉಂಟಾಗಿದೆ.
ರಾತ್ರಿ ಎಸ್ಪಿ ರಾಮನಿವಾಸ್ ಸೆಪಟ್, ದಕ್ಷಿಣ ವಲಯ ಐಜಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.