ADVERTISEMENT

ಚರ್ಚಿಸದೆ ದೇವಾಲಯಗಳ ತೆರವು ಮಾಡಿದ್ದು ಸರಿಯಲ್ಲ- ಬಿ.ಎಸ್.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 17 ಸೆಪ್ಟೆಂಬರ್ 2021, 9:56 IST
Last Updated 17 ಸೆಪ್ಟೆಂಬರ್ 2021, 9:56 IST
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ    

ಮೈಸೂರು: ದೇವಾಲಯಗಳನ್ನು ತೆರವು ಮಾಡಿದ್ದು ಸರಿಯಲ್ಲ. ಈ ಬಗ್ಗೆ ಮೊದಲು ಚರ್ಚೆ ಮಾಡಬೇಕಿತ್ತು. ಯಾವುದೇ ಕಾರಣಕ್ಕೂ ದೇಗುಲ ತೆರವು ಮಾಡಬಾರದು ಎಂದು ಬಿ.ಎಸ್.ಯಡಿಯೂರಪ್ಪ ಒತ್ತಾಯಿಸಿದರು.

ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸದ್ಯಕ್ಕೆ ಯಾವುದೇ ಉಪ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಹಾಗೂ ಮುಂದೆ ಸ್ಪರ್ಧಿಸುವ ಕ್ಷೇತ್ರವೂ ಅಂತಿಮವಾಗಿಲ್ಲ ಎಂದು ಇಲ್ಲಿ ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ವಿಧಾನಸಭಾ ಅಧಿವೇಶನ ಮುಗಿದ ನಂತರ ನಾನು ಮತ್ತು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ ಒಟ್ಟಿಗೆ ಮಾಡುವ ಪ್ರವಾಸದ ಕುರಿತು ರೂಪುರೇಷೆ ನಿರ್ಧರಿಸಲಾಗುವುದು ಎಂದು ಹೇಳಿದರು.

ADVERTISEMENT

ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಮುಂದಿನ ದಿನದಲ್ಲಿ ಇನ್ನು ಉತ್ತಮ ಆಡಳಿತ ನೀಡಲಿದ್ದಾರೆ ಎಂದರು.

ನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಶಾಸಕ ಎಸ್.ಎ.ರಾಮದಾಸ್ ಕೆ.ಆರ್.ಕ್ಷೇತ್ರದಲ್ಲಿ ಆಯೋಜಿಸಿದ್ದ ಮೋದಿ ಯುಗ್ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.