ವಿಜಯಪುರ: ‘ಮಂಡ್ಯದಲ್ಲಿ ಪ್ರಧಾನಿ ಮೋದಿ ಅವರ ಸ್ವಾಗತಕ್ಕಾಗಿ ಅಳವಡಿಸಲಾಗಿದ್ದ ಉರಿಗೌಡ ಮತ್ತು ದೊಡ್ಡ ನಂಜೇಗೌಡ ಮಹಾದ್ವಾರ ತೆರವುಗೊಳಿಸಿದ್ದು ಅಕ್ಷಮ್ಯ ಅಪರಾಧ’ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
ಆಲಮಟ್ಟಿಯಲ್ಲಿ ಮಾತನಾಡಿದ ಅವರು, ‘ಉರಿಗೌಡ ಮತ್ತು ದೊಡ್ಡ ನಂಜೇಗೌಡ ಅವರಿಗೆ ಇತಿಹಾಸದಲ್ಲಿ ಗೌರವ ಸಿಕ್ಕಿರಲಿಲ್ಲ, ಅವರು ಟಿಪ್ಪು ಸುಲ್ತಾನ್ನನ್ನು ಏಕೆ ಹತ್ಯೆ ಮಾಡಿದ್ದಾರೆ? ಎಂಬುದು ಬೆಳಕಿಗೆ ಬರಬೇಕಿದೆ. ಅವರ ಹೆಸರಲ್ಲಿ ಶಾಶ್ವತ ದ್ವಾರ ಮಂಡ್ಯದಲ್ಲಿ ನಿರ್ಮಿಸಲು ಅಲ್ಲಿಯ ಜನರು ಈ ಬಾರಿ ಬಿಜೆಪಿಗೆ ಶಕ್ತಿ ಕೊಡಲಿದ್ದಾರೆ’ ಎಂದರು.
‘ಕಾಂಗ್ರೆಸ್, ಜೆಡಿಎಸ್ನಲ್ಲಿ ಆಂತರಿಕ ಪ್ರಜಾಪ್ರಭುತ್ವ ಇಲ್ಲ. ಈ ಪಕ್ಷಗಳಲ್ಲಿ ಡಿಎನ್ಎ ಮೂಲಕವೇ ನಾಯಕತ್ವ ಬರುತ್ತದೆ. ಬಿಜೆಪಿಯಲ್ಲಿ ಮಾತ್ರ ಆಂತರಿಕ ಪ್ರಜಾಪ್ರಭುತ್ವ ಇದೆ’ ಎಂದರು.
‘ನಮ್ಮ ಪಕ್ಷದಲ್ಲಿ ಅವರ ಮಕ್ಕಳು, ಇವರ ಮಕ್ಕಳು ಎನ್ನುವ ಕಾರಣಕ್ಕೆ ಚುನಾವಣೆಯಲ್ಲಿ ಟಿಕೆಟ್ ಕೊಡುವುದಿಲ್ಲ. ಪಕ್ಷದ ವೇದಿಕೆಯಲ್ಲಿ ನಿರ್ಧಾರವಾಗುತ್ತದೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.