ADVERTISEMENT

ಇಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ

​ಪ್ರಜಾವಾಣಿ ವಾರ್ತೆ
Published 28 ಜುಲೈ 2019, 17:49 IST
Last Updated 28 ಜುಲೈ 2019, 17:49 IST

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ವಿಶ್ವಾಸಮತ ಯಾಚಿಸುವ ಪ್ರಯುಕ್ತ ಕಾರ್ಯತಂತ್ರ ರೂಪಿಸಲು ಸೋಮವಾರ ಬೆಳಿಗ್ಗೆ 9 ಗಂಟೆಗೆ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್‌ಶಾಸಕಾಂಗ ಪಕ್ಷದ ಸಭೆ ವಿಧಾನಸೌಧದಲ್ಲಿ ನಡೆಯಲಿದೆ.

ಪಕ್ಷದ 13 ಮಂದಿ ಅತೃಪ್ತ ಶಾಸಕರು ಹಾಗೂ ಅಸೌಖ್ಯದ ಕಾರಣ ನೀಡಿ ಸದನಕ್ಕೆ ಗೈರಾಗಿದ್ದ ಶ್ರೀಮಂತ ಪಾಟೀಲ ಅವರನ್ನು ಸಭಾಧ್ಯಕ್ಷರು ಅನರ್ಹಗೊಳಿಸಿದ್ದರಿಂದ ಪಕ್ಷ ಒಂದು ರೀತಿಯಲ್ಲಿ ಹುಮ್ಮಸ್ಸಿನಲ್ಲಿದ್ದರೂ, ವಿಶ್ವಾಸಮತ ಗಳಿಸುವ ನಿರೀಕ್ಷೆಯಲ್ಲಿರುವ ಯಡಿಯೂರಪ್ಪ ಸರ್ಕಾರವನ್ನು ಪ್ರಮುಖ ವಿರೋಧ ಪಕ್ಷವಾಗಿ ಕಟ್ಟಿಹಾಕುವ ನಿಟ್ಟಿನಲ್ಲಿ ಸಭೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT