ADVERTISEMENT

ನಾಳೆ ಅನೌಪಚಾರಿಕ ಸಂಪುಟ ಸಭೆ ಕರೆದ ಸಿಎಂ, ಸದ್ಯಕ್ಕೆ ರಾಜೀನಾಮೆ ನಿರ್ಧಾರವಿಲ್ಲ

'ಕಾಂಗ್ರೆಸ್‌ನ ನಿಲುವನ್ನು ಗಮನಿಸಿ, ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಿನ ನಿರ್ಧಾರ'

​ಪ್ರಜಾವಾಣಿ ವಾರ್ತೆ
Published 23 ಮೇ 2019, 11:14 IST
Last Updated 23 ಮೇ 2019, 11:14 IST
   

ಬೆಂಗಳೂರು:ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಭಾರಿ ಮುಖಭಂಗ ಅನುಭವಿಸಿರುವ ಮೈತ್ತಿ ಸರ್ಕಾರದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಅನೌಪಚಾರಿಕ ಸಭೆ ಕರೆದಿದ್ದಾರೆ.

ದೇವೇಗೌಡರ ಮನೆಯಲ್ಲಿ ಕುಮಾರಸ್ವಾಮಿ ಮತ್ತು ಪಕ್ಷದ ಶಾಸಕರ ಸಭೆ ನಡೆಯುತ್ತಿದೆ. ರಾಜ್ಯ ಸರ್ಕಾರ ರಾಜೀನಾಮೆ ಕೊಡುವ ವಿಷಯಕ್ಕೆ ಜೆಡಿಎಸ್‌ ಶಾಸಕರ ಒಲವು ವ್ಯಕ್ತಪಡಿಸಿಲ್ಲ.

ಶುಕ್ರವಾರ ಬೆಳಿಗ್ಗೆ ಅನೌಪಚಾರಿಕ ಸಂಪುಟ ಸಭೆ ನಡೆಯಲಿದ್ದು, ಸರ್ಕಾರದ ಮೈತ್ರಿ ಪಕ್ಷವಾದ ಕಾಂಗ್ರೆಸ್‌ನ ನಿಲುವನ್ನು ಗಮನಿಸಿ, ಮುಖ್ಯಮಂತ್ರಿ ಕುಮಾರಸ್ವಾಮಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಗೊತ್ತಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.