ADVERTISEMENT

ಕೊಡಗಿನಲ್ಲೂ ಸಿ.ಎಂ ಗ್ರಾಮ ವಾಸ್ತವ್ಯಕ್ಕೆ ಚಿಂತನೆ?

​ಪ್ರಜಾವಾಣಿ ವಾರ್ತೆ
Published 2 ಜೂನ್ 2019, 20:05 IST
Last Updated 2 ಜೂನ್ 2019, 20:05 IST
ಎಚ್‌.ಡಿ. ಕುಮಾರಸ್ವಾಮಿ
ಎಚ್‌.ಡಿ. ಕುಮಾರಸ್ವಾಮಿ   

ಮಡಿಕೇರಿ: ಕಳೆದ ವರ್ಷ ಭಾರೀ ಮಳೆ, ಭೂಕುಸಿತ ಹಾಗೂ ಪ್ರವಾಹದಿಂದ ತತ್ತರಿಸಿದ್ದ ಕೊಡಗಿನಲ್ಲಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು ಗ್ರಾಮ ವಾಸ್ತವ್ಯ ಮಾಡಲಿದ್ದಾರೆಯೇ? ಹೀಗೊಂದು ಮಾತು ಜಿಲ್ಲೆಯಲ್ಲಿ ಕೇಳಿಬರುತ್ತಿದೆ.

ಕುಮಾರಸ್ವಾಮಿ ಅವರ 20 ತಿಂಗಳ ಜನಪ್ರಿಯ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಮರು ಚಾಲನೆ ನೀಡಲು ಈ ಬಾರಿಯೂ ಮುಂದಾಗಿದ್ದು, ಮುಂದಿನ ತಿಂಗಳು ಕೊಡಗಿನ ಯಾವುದಾದರೂ ಒಂದು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎನ್ನಲಾಗಿದೆ. ಅಧಿಕೃತವಾಗಿ ಕಾರ್ಯಕ್ರಮ ನಿಗದಿ ಆಗದಿದ್ದರೂ ಇಂತಹದ್ದೊಂದು ಚರ್ಚೆಯಾಗಿದೆ.

ಮಳೆ ಹಾನಿಗೆ ರಾಜ್ಯ ಸರ್ಕಾರ ಸಾಕಷ್ಟು ಪರಿಹಾರವನ್ನೂ ಒದಗಿಸಿದೆ. ಫಲಾನುಭವಿಗಳಿಗೆ ಪರಿಹಾರದ ಹಣ ತಲುಪಿದೆಯೇ ಎಂಬುದನ್ನು ಖುದ್ದು ಪರಿಶೀಲಿಸಲು ಮುಖ್ಯಮಂತ್ರಿ ಆಲೋಚಿಸಿದ್ದಾರೆ ಎನ್ನಲಾಗಿದೆ.

ಸಂತ್ರಸ್ತರಿಗೆ ನೀಡಲಿರುವ ಮನೆಗಳಲ್ಲಿಯೇ ವಾಸ್ತವ್ಯ ಮಾಡಲಿದ್ದಾರೆಯೇ ಅಥವಾ ಯಾವುದಾದರೂ ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆಯೇ ಎಂಬುದು ಅಧಿಕೃತಗೊಳ್ಳಬೇಕು ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಚಿವ ಸಾ.ರಾ. ಮಹೇಶ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಅಲ್ಲಿ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT