ನವದೆಹಲಿ (ಎಎನ್ಐ): ಕಾಲಭೈರವೇಶ್ವರನ ದೇಗುಲ ನಿರ್ಮಾಣದ ಅಡಿಗಲ್ಲು ಕಾರ್ಯಕ್ರಮಕ್ಕೆಂದು ಅಮೆರಿಕಕ್ಕೆ ತೆರಳಿದ್ದ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ರಾಜ್ಯದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ನಡೆದ ಹಿನ್ನೆಲೆಯಲ್ಲಿ ಭಾನುವಾರ ದಿಢೀರ್ ಭಾರತಕ್ಕೆ ಆಗಮಿಸಿದ್ದಾರೆ.
ಸದ್ಯ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಅವರು ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ಬಹುತೇಕ ಸಂಜೆ ಹೊತ್ತಿಗೆ ಅವರು ಬೆಂಗಳೂರಿಗೆ ಆಗಮಿಸುವ ನಿರೀಕ್ಷೆ ಇದೆ.
ಸಿಎಂ ಎಚ್ಡಿಕೆದೆಹಲಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ ವಿಮಾನದ ಮೂಲಕ ಆಗಮಿಸಲಿದ್ದಾರೆ ಎಂದು ಈ ಮೊದಲು ಅವರ ಕಚೇರಿ ತಿಳಿಸಿತ್ತು. ಆದರೆ, ಈಗವಿಶೇಷ ವಿಮಾನದ ಮೂಲಕ ಅವರು ತುರ್ತಾಗಿ ಬೆಂಗಳೂರಿಗೆ ಬರುತ್ತಿದ್ದಾರೆ.
ಸಿಎಂ ಆಗಮನದನಂತರದ ಬೆಳವಣಿಗೆಗಳು ಕುತೂಹಲಕ್ಕೆ ಕಾರಣವಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.