ADVERTISEMENT

ಮಳೆ ಹಾನಿ: ಡಿ.ಸಿಗಳ ಜೊತೆ ಸಿಎಂ ಸಂವಾದ ಇಂದು

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 0:30 IST
Last Updated 8 ಜುಲೈ 2022, 0:30 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಅತಿ ಹೆಚ್ಚು ಮಳೆ ಸುರಿಯುತ್ತಿರುವ ರಾಜ್ಯದ 13 ಜಿಲ್ಲೆಗಳ ಉಸ್ತುವಾರಿ ಸಚಿವರು, ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ವಿಡಿಯೊ ಸಂವಾದ ನಡೆಸಲಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 2.30ಕ್ಕೆ ಈ ಸಂವಾದ ನಡೆಯಲಿದೆ. ಈ ಜಿಲ್ಲೆಗಳಲ್ಲಿ ಬಿದ್ದಿರುವ ಮಳೆ ಪ್ರಮಾಣ, ಸಂಭವಿಸಿರುವ ಹಾನಿ,‌ ಈವರೆಗೆ ಕೈಗೊಂಡಿರುವ ತುರ್ತು ಕ್ರಮಗಳ ಕುರಿತು ಮುಖ್ಯಮಂತ್ರಿ ಮಾಹಿತಿ ಪಡೆಯಲಿದ್ದಾರೆ. ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಮುಖ್ಯಮಂತ್ರಿ, ‘ಮಳೆ ಎದುರಿಸಲು ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT