ADVERTISEMENT

ಅಂತರರಾಜ್ಯ ಜಲ ವಿವಾದ ಕಾಯ್ದೆ ಅಪ್ರಸ್ತುತ: ಸಿಎಂ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 20:31 IST
Last Updated 22 ಅಕ್ಟೋಬರ್ 2022, 20:31 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಹೊಸದುರ್ಗ: ‘ಅಂತರರಾಜ್ಯ ಜಲ ವಿವಾದ ಕಾಯ್ದೆ ಅಪ್ರಸ್ತುತವಾಗಿದೆ. ಇದು ಸಮಸ್ಯೆ ಇತ್ಯರ್ಥಪಡಿಸುವ ಬದಲು ಹಲವು ಪ್ರಕರಣಗಳಿಗೆ ಕಾರಣವಾಗಿದೆ. ನ್ಯಾಯಾಧೀಕರಣ ರಚನೆ ಮಾಡಿ ಜಲವಿವಾದವನ್ನು ಇನ್ನಷ್ಟು ಕಗ್ಗಂಟು ಮಾಡಲಾಗುತ್ತಿದೆ’ ಎಂದುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ನ್ಯಾಯಾಂಗ ಇಲಾಖೆ ಹಾಗೂ ವಕೀಲರ ಸಂಘದಿಂದ ಶನಿವಾರ ಏರ್ಪಡಿಸಿದ್ದ ಹೊಸದುರ್ಗ ನ್ಯಾಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಕಾಲ ಬದಲಾದಂತೆ ಹಲವು ಕಾನೂನುಗಳು ಅಪ್ರಸ್ತುತವಾಗಿವೆ. ಇಂತಹ ಕಾನೂನುಗಳನ್ನು ಗುರುತಿಸಿ ಬದಲಾವಣೆ ತರುವ ಅಗತ್ಯವಿದೆ. ಕ್ಲಿಷ್ಟಕರ ವ್ಯವಸ್ಥೆಯ ನಡುವೆ ನ್ಯಾಯಾಂಗದ ಮೇಲೆ ಜನರಿಗೆ ನಂಬಿಕೆ ಇದೆ. ಈ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಕಾನೂನುಗಳಲ್ಲಿ ಬದಲಾವಣೆ ಆಗಬೇಕಿದೆ. ಈ ನಿಟ್ಟಿನಲ್ಲಿ ಸರ್ಕಾರ ಪ್ರಯತ್ನಿಸಲಿದೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.