ADVERTISEMENT

ಸಂಕಷ್ಟದ ಸಮಯದಲ್ಲಿ ಭಾರತ್ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2021, 1:49 IST
Last Updated 26 ಸೆಪ್ಟೆಂಬರ್ 2021, 1:49 IST
 ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಹುಬ್ಬಳ್ಳಿ: ‘ಕೋವಿಡ್‌ ಸಂಕಷ್ಟದಿಂದ ಈಗಷ್ಟೇ ಜನರು ಚೇತರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರೈತ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿರುವುದು ಸರಿಯಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಶನಿವಾರ ಮಾತನಾಡಿದ ಅವರು, ‘ಕೋವಿಡ್‌ನಿಂದಾಗಿ ಎಲ್ಲ ಕ್ಷೇತ್ರಗಳ ಕಾರ್ಯಚಟುವಟಿಕೆಗಳು ಕುಂಠಿತಗೊಂಡಿದ್ದವು. ಸದ್ಯ ಕೊರೊನಾ ಸೋಂಕು ಪ್ರಮಾಣ ಇಳಿಮುಖವಾಗುತ್ತಿದ್ದು, ಮಾರುಕಟ್ಟೆಯಲ್ಲಿ ವ್ಯಾಪಾರ, ವಹಿವಾಟು ಪುನರಾರಂಭವಾಗುತ್ತಿವೆ. ಈ ಸಂದರ್ಭದಲ್ಲಿ ಪ್ರತಿಭಟನೆ, ಬಂದ್‌ ನಡೆಸಿದರೆ ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ರೈತ ಸಂಘಟನೆಗಳು ಬಂದ್‌ ನಡೆಸದೆ ಸಹಕಾರ ನೀಡಬೇಕು’ ಎಂದು ವಿನಂತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.