ADVERTISEMENT

ಗಣೇಶೋತ್ಸವ ಅನುಮತಿಗೆ ಹೆಚ್ಚಿದ ಒತ್ತಡ: ಸಿ.ಎಂ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2021, 19:45 IST
Last Updated 1 ಸೆಪ್ಟೆಂಬರ್ 2021, 19:45 IST
 ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಹುಬ್ಬಳ್ಳಿ: ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡುವಂತೆ ಒತ್ತಡ ಹೆಚ್ಚಾಗುತ್ತಿದ್ದು, ಸೆ. 5ರಂದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬುಧವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಕೋವಿಡ್‌ ಪರಿಸ್ಥಿತಿಯಲ್ಲಿ ಹಿಂದಿನ ವರ್ಷ ಯಾವ ರೀತಿ ಗಣೇಶೋತ್ಸವ ಆಚರಿಸಲಾಗಿತ್ತು. ಈ ವರ್ಷ ಪರಿಸ್ಥಿತಿ ಬಗ್ಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ನೀಡುವ ವರದಿಯನ್ನು ತಜ್ಞರ ತಂಡ ಪರಿಶೀಲನೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಲಾಗುವುದು’ ಎಂದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಗುರುವಾರ ಹುಬ್ಬಳ್ಳಿಗೆ ಬರಲಿದ್ದು, ರಾಜ್ಯದ ಅಭಿವೃದ್ಧಿ ಕಾರ್ಯಗಳು ಹಾಗೂ ಭವಿಷ್ಯದ ಯೋಜನೆಗಳ ಬಗ್ಗೆ ಚರ್ಚೆಯಾಗಲಿವೆ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.