ADVERTISEMENT

ಮೇಕೆದಾಟು ವಿಚಾರದಲ್ಲಿ ಯಾವುದೇ ರಾಜಿ ಇಲ್ಲ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 6:34 IST
Last Updated 5 ಆಗಸ್ಟ್ 2021, 6:34 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ‘ಮೇಕೆದಾಟು ವಿಚಾರದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.

ಆರ್‌.ಟಿ. ನಗರದಲ್ಲಿರುವ ತಮ್ಮ ನಿವಾಸ ಬಳಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, ‘ಈ ವಿಚಾರವನ್ನು ತಮಿಳುನಾಡಿನಲ್ಲಿ ರಾಜಕಾರಣಕ್ಕೆ ಬಳಸುತ್ತಿದ್ದಾರೆ. ಅಲ್ಲಿ ಯಾವುದೇ ಪಕ್ಷದವರು ಇರಬಹುದು, ಅವರು ರಾಜಕಾರಣಕ್ಕಾಗಿ ವಿರೋಧ ಮಾಡುತ್ತಿದ್ದಾರೆ’ ಎಂದರು.

‘ಕುಡಿಯುವ ನೀರು, ವಿದ್ಯುತ್ಛಕ್ತಿ ಮತ್ತು ಕಷ್ಟ ಕಾಲದಲ್ಲಿ ನೀರನ್ನು ಹಂಚಕೆ ಮಾಡಬಹುದು ಎಂದು ಎಲ್ಲರಿಗೂ ಗೊತ್ತಿದೆ. ಈ ಯೋಜನೆ ಆ ಉದ್ದೇಶ ಹೊಂದಿದೆ ಎಂದು ಎಲ್ಲರಿಗೂ ಗೊತ್ತಿದೆ. ಇತ್ತೀಚೆಗೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಯೋಜನೆಯ ಬಗ್ಗೆ ತಿಳಿಸಿದ್ದೇನೆ. ರಾಜ್ಯದ ಸಂಸದರ ನಿಯೋಗದ ಜೊತೆಗೂ ಭೇಟಿ ಮಾಡಿ ಒತ್ತಾಯ ಮಾಡಿದ್ದೇನೆ’ ಎಂದರು.

ADVERTISEMENT

‘ಯೋಜನೆಯ ಸಮಗ್ರ ವಿಸ್ಕೃತ ಯೋಜನೆಗೆ (ಡಿಪಿಆರ್‌) ಶೀಘ್ರದಲ್ಲಿ ಅನುಮತಿ ಸಿಗುವ ವಿಶ್ವಾವಿದೆ. ಇತರ ಎಲ್ಲದಕ್ಕೂ ಅನುಮತಿ ಸಿಗಲಿದೆ. ಅದು ಸಿಕ್ಕಿದ ತಕ್ಷಣ ಕಾಮಗಾರಿ ಆರಂಭಿಸುವುದು ಶತಸಿದ್ಧ. ಅದರಲ್ಲಿ ಯಾವುದೇ ರಾಜಿ ಇಲ್ಲ’ ಎಂದರು.

‘ಯೋಜನೆ ವಿರೋಧಿಸಿ ಯಾರಾದರೂ ಪ್ರತಿಭಟನೆ ಮಾಡುತ್ತಿದ್ದರೆ ಅದಕ್ಕೂ ನಮಗೂ ಸಂಬಂಧ ಇಲ್ಲ. ಅದು ರಾಜಕಾರಣಕ್ಕೆ ಮಾಡುತ್ತಿದ್ದಾರೆ. ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳುವುದಿಲ್ಲ’ ಎಂದೂ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.