ADVERTISEMENT

ನಾಳೆ ದಾವೋಸ್‌ಗೆ ಬೊಮ್ಮಾಯಿ ಪಯಣ

​ಪ್ರಜಾವಾಣಿ ವಾರ್ತೆ
Published 20 ಮೇ 2022, 18:41 IST
Last Updated 20 ಮೇ 2022, 18:41 IST
   

ಬೆಂಗಳೂರು: ದಾವೋಸ್‌ನಲ್ಲಿ ನಡೆಯಲಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಮಾವೇಶದಲ್ಲಿ ಭಾಗ
ವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇದೇ 22ರ ಭಾನುವಾರ ಬೆಳಿಗ್ಗೆ ಪ್ರಯಾಣ ಬೆಳೆಸಲಿದ್ದಾರೆ.

ಇದೇ 23 ಮತ್ತು 24 ರಂದು ಆರ್ಥಿಕ ಸಮಾವೇಶ ನಡೆಯಲಿದ್ದು, ಬೊಮ್ಮಾಯಿ ಅದರಲ್ಲಿ ಪಾಲ್ಗೊಳ್ಳಲಿ
ದ್ದಾರೆ.ಇದೇ 26 ರಂದು ವಾಪಸ್‌ ಆಗಲಿದ್ದಾರೆ.

ರಾಜ್ಯದಲ್ಲಿ ವಿವಿಧ ರೀತಿಯ ಕೈಗಾರಿಕೆಗಳ ಹೂಡಿಕೆಗಳಿಗೆ ಇರುವ ವಿಪುಲ ಅವಕಾಶಗಳ ಬಗ್ಗೆ ವಿಶ್ವದ ಹೂಡಿಕೆದಾರರಿಗೆ ಮನವರಿಕೆ ಮಾಡಿ ರಾಜ್ಯಕ್ಕೆ ಹೂಡಿಕೆದಾರರನ್ನು ಸೆಳೆಯಲು ಮುಖ್ಯಮಂತ್ರಿ ಮತ್ತು ಅವರ ತಂಡ ಪ್ರಯತ್ನಿಸಬೇಕಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.