ADVERTISEMENT

ಬೆಂಗಳೂರಿಗೆ ಬಂದಿಳಿದ ರಾಷ್ಟ್ರಪತಿ ರಾಮನಾಥ್ ಕೋವಿಂದ್

​ಪ್ರಜಾವಾಣಿ ವಾರ್ತೆ
Published 13 ಜೂನ್ 2022, 9:29 IST
Last Updated 13 ಜೂನ್ 2022, 9:29 IST
   

ಬೆಂಗಳೂರು: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಎರಡು ದಿನಗಳ ಪ್ರವಾಸಕ್ಕಾಗಿ ಸೋಮವಾರ ಮಧ್ಯಾಹ್ನ ಬೆಂಗಳೂರಿಗೆ ಬಂದಿಳಿದರು.

ವಾಯುಪಡೆಯ ವಿಶೇಷ ವಿಮಾನದಲ್ಲಿ ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು. ಮೈಸೂರು ಪೇಟ, ರೇಷ್ಮೆ ಶಾಲು, ಹಾರ ಹಾಕಿ ಸನ್ಮಾನಿಸಿದರು.

ಸೋಮವಾರ ಸಂಜೆ ರಾಷ್ಟ್ರೀಯ ಮಿಲಿಟರಿ ಶಾಲೆಯ ಪ್ಲಾಟಿನಂ ಮಹೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿ ಪಾಲ್ಗೊಳ್ಳುವರು‌. ಕನಕಪುರ ರಸ್ತೆಯ ವಸಂತಪುರ ಸಮೀಪದ ವೈಕುಂಠ ಬೆಟ್ಟದಲ್ಲಿ ಇಸ್ಕಾನ್ ನಿರ್ಮಿಸಿರುವ ರಾಜಾಧಿರಾಜ ಗೋವಿಂದ ದೇವಾಲಯವನ್ನು ಮಂಗಳವಾರ ಉದ್ಘಾಟಿಸುವರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.