ADVERTISEMENT

ರಾಹುಲ್‌ ಗಾಂಧಿಗೆ ದಾಖಲೆ ಕಳುಹಿಸುವೆ: ಸಿ.ಎಂ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2022, 20:54 IST
Last Updated 16 ಅಕ್ಟೋಬರ್ 2022, 20:54 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ    

ಮಂಡ್ಯ: ‘ಕಾಸಿದ್ದವರಿಗೆ ಮಾತ್ರ ಕರ್ನಾಟಕದಲ್ಲಿ ಪದವಿ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು ‘ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ಎಷ್ಟೆಲ್ಲಾ ಹಗರಣಗಳು ನಡೆದಿವೆ ಎಂಬ ವಿಚಾರ ರಾಹುಲ್‌ ಗಾಂಧಿ ಅವರಿಗೆ ಗೊತ್ತಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ, ಕಾನ್‌ಸ್ಟೆಬಲ್‌ ನೇಮಕಾತಿ ಮುಂತಾದ ಹಗರಣ ಕುರಿತ ದಾಖಲಾತಿ ಸಂಗ್ರಹಿಸಲಾಗಿದ್ದು ಅವರಿಗೆ ಶೀಘ್ರ ಕಳುಹಿಸುತ್ತೇನೆ. ಅದನ್ನು ನೋಡಿದ ನಂತರ ಅವರು ಮಾತನಾಡಲಿ’ ಎಂದರು.

ಮಳವಳ್ಳಿ ಬಾಲಕಿ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ: ‘ಮಳವಳ್ಳಿಯಲ್ಲಿ ಬಾಲಕಿಯ ಮೇಲೆ ನಡೆದ ಅಮಾನುಷ ಕೃತ್ಯವನ್ನು ಖಂಡಿಸಲು ನನ್ನಲ್ಲಿ ಪದಗಳಿಲ್ಲ. ಬಾಲಕಿಯ ಕುಟುಂಬ ಸದಸ್ಯರಿಗೆ ಸರ್ಕಾರದಿಂದ ₹ 10 ಲಕ್ಷ ಪರಿಹಾರ ನೀಡಲಾಗುವುದು’ ಎಂದು ಮುಖ್ಯಮಂತ್ರಿ ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.