ADVERTISEMENT

ಮಠಗಳಿಂದ ಶೇ 30 ಕಮಿಷನ್‌: ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ಸಿ.ಎಂ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2022, 21:01 IST
Last Updated 18 ಏಪ್ರಿಲ್ 2022, 21:01 IST
ಬೊಮ್ಮಾಯಿ
ಬೊಮ್ಮಾಯಿ    

ಬೆಂಗಳೂರು: ‘ಮಠಗಳಿಗೆ ಮಂಜೂರಾದ ಅನುದಾನದ ಮೊತ್ತ ಪಡೆಯಲು ಶೇ 30ರಷ್ಟು ಕಮಿಷನ್‌ ಕೊಡಬೇಕಿದೆ ಎಂಬ ಆರೋಪಕ್ಕೆ ಪೂರಕವಾಗಿ ದಿಂಗಾಲೇಶ್ವರ ಸ್ವಾಮೀಜಿ ದಾಖಲೆ ಒದಗಿಸಿದರೆ ತನಿಖೆಗೆ ಸಿದ್ಧ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ದಿಂಗಾಲೇಶ್ವರರು ಪರಮಪೂಜ್ಯರು, ಮಹಾತ್ಮರು, ತಪಸ್ವಿಗಳು. ಮಠಾಧೀಶರು ಹೇಳಿಕೆ ನೀಡಿದರೆ ಸಾಕಾಗುವುದಿಲ್ಲ’ ಎಂದು ಹೇಳಿದರು.

‘ಸ್ವಾಮೀಜಿಗಳು ಯಾರಿಗೆ? ಯಾವ ಉದ್ದೇಶಕ್ಕಾಗಿ? ಎಷ್ಟು ಮೊತ್ತದ ಲಂಚ ಕೊಟ್ಟಿದ್ದಾರೆ ಎಂಬುದರ ಬಗ್ಗೆ ವಿವರಗಳನ್ನು ಒದಗಿಸಲಿ. ಪ್ರಕರಣದ ಸಂಪೂರ್ಣ ಆಳಕ್ಕೆ ಇಳಿದು ತನಿಖೆ ಮಾಡಿಸಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.