ಬೆಂಗಳೂರು: ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೇ 22ರಿಂದ ದಾವೋಸ್ ಪ್ರವಾಸ ಕೈಗೊಳ್ಳಲಿದ್ದಾರೆ.
ಸ್ವಿಟ್ಜರ್ಲೆಂಡ್ನ ದಾವೋಸ್ನಲ್ಲಿ ಮೇ 22ರಿಂದ 26ರವರೆಗೆ ವಿಶ್ವ ಆರ್ಥಿಕ ಶೃಂಗಸಭೆ ನಡೆಯಲಿದೆ. ಈ ಸಮ್ಮೇಳನಕ್ಕೆ ಬೊಮ್ಮಾಯಿ ಅವರಿಗೂ ಆಹ್ವಾನ ಬಂದಿದೆ. ಮುಖ್ಯಮಂತ್ರಿ ನೇತೃತ್ವದ ನಿಯೋಗ ಮೇ 22ರಂದು ದಾವೋಸ್ಗೆ ತೆರಳಲಿದ್ದು, ಮೇ 26ರಂದು ರಾಜ್ಯಕ್ಕೆ ವಾಪಸಾಗಲಿದೆ ಎಂದು ಮುಖ್ಯಮಂತ್ರಿಯವರ ಸಚಿವಾಲಯದ ಮೂಲಗಳು ತಿಳಿಸಿವೆ.
ರಾಜ್ಯಕ್ಕೆ ವಿದೇಶಿ ಹೂಡಿಕೆ ಆಕರ್ಷಿಸುವುದಕ್ಕೆ ದಾವೋಸ್ ಭೇಟಿಯನ್ನು ಬಳಸಿಕೊಳ್ಳಲು ಮುಖ್ಯಮಂತ್ರಿ ಸಿದ್ಧತೆ ನಡೆಸಿದ್ದಾರೆ. ನಿಯೋಗದಲ್ಲಿ ಕೆಲವು ಸಚಿವರನ್ನೂ ಕರೆದೊಯ್ಯುವ ಸಾಧ್ಯತೆ ಇದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.