ADVERTISEMENT

ಸಂಪುಟ ಪುನಾರಚನೆ ಬಗ್ಗೆ ಅಪೇಕ್ಷೆ ಇದೆ: ಬಿ.ಎಸ್‌.ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2020, 14:29 IST
Last Updated 18 ಸೆಪ್ಟೆಂಬರ್ 2020, 14:29 IST
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ   

ನವದೆಹಲಿ: ‘ಸಂಪುಟ ಪುನಾರಚನೆ ಮಾಡಬೇಕು ಎಂಬ ಅಪೇಕ್ಷೆ ಇದೆ. ಈ ಬಗ್ಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಜತೆ ಚರ್ಚೆ ನಡೆಸಿದ್ದೇನೆ. ಪ್ರಧಾನಿ ಜತೆ ಚರ್ಚಿಸಿ ತಿಳಿಸುವುದಾಗಿ ನಡ್ಡಾ ತಿಳಿಸಿದ್ದಾರೆ. ಅವರು ಹೇಗೆ ಸೂಚನೆ ಕೊಡುತ್ತಾರೆ ಹಾಗೆ ನಡೆದುಕೊಳ್ಳುತ್ತೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ದೆಹಲಿಯಲ್ಲಿ ನಡ್ಡಾ ಅವರನ್ನು ಶುಕ್ರವಾರ ಸಂಜೆ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ‘ಅಧಿವೇಶನಕ್ಕೆ ಮುನ್ನವೇ ಪುನಾರಚನೆ ಮಾಡಬೇಕು ಎಂಬ ಅಪೇಕ್ಷೆ ಇದೆ. ಚರ್ಚೆ ಮಾಡಲಿರುವ ವರಿಷ್ಠರು ಶನಿವಾರ ನಿರ್ದೇಶನ ನೀಡುವ ಸಾಧ್ಯತೆ ಇದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.