ದೇವನಹಳ್ಳಿ: ರಾಜಕೀಯ ಜಂಜಾಟಗಳಿಂದ ಬಿಡುವು ಪಡೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರುಭಾನುವಾರನಂದಿ ಬೆಟ್ಟದ ರಸ್ತೆಯಲ್ಲಿರುವ ಪ್ರೆಸ್ಟೀಜ್ ಗಾಲ್ಫ್ ಶೇರ್ ರೆಸಾರ್ಟ್ನಲ್ಲಿ ವಿಶ್ರಾಂತಿ ಪಡೆದರು.
ಬೆಂಗಾವಲು ವಾಹನಗಳಿಲ್ಲದೆ ಮಧ್ಯಾಹ್ನಅವರು ರೆಸಾರ್ಟ್ಗೆ ಬಂದರು.‘ಉಪ ಚುನಾವಣೆ ತಂತ್ರಗಾರಿಕೆ ಮತ್ತು ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಯಡಿಯೂರಪ್ಪ ಇಲ್ಲಿಗೆ ಬಂದಿದ್ದಾರೆ’ ಎಂದು ಹೇಳಲಾಗಿದೆ.
‘ಮೊಮ್ಮಕ್ಕಳ ಜನ್ಮದಿನಾಚರಣೆಗಾಗಿ ಮುಖ್ಯಮಂತ್ರಿಗಳು ಕುಟುಂಬ ಸದಸ್ಯರ ಜತೆ ರೆಸಾರ್ಟ್ಗೆ ಬಂದಿದ್ದಾರೆ. ಇದೊಂದು ಖಾಸಗಿ ಭೇಟಿ. ರಾಜಕೀಯ ಚರ್ಚೆ ನಡೆದಿಲ್ಲ’ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.