ADVERTISEMENT

ರಾಷ್ಟ್ರೀಯ ನಾಯಕರ ಜೊತೆ ಸಂಪುಟ ವಿಸ್ತರಣೆ ಚರ್ಚೆ: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 10 ಜನವರಿ 2021, 4:49 IST
Last Updated 10 ಜನವರಿ 2021, 4:49 IST
ಬಿ.ಎಸ್. ಯಡಿಯೂರಪ್ಪ
ಬಿ.ಎಸ್. ಯಡಿಯೂರಪ್ಪ    

ಬೆಂಗಳೂರು: ‘ಸಂಪುಟ ವಿಸ್ತರಣೆಯೂ ಸೇರಿದಂತೆ ಹಲವು ವಿಷಯಗಳ ಕುರಿತು ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಲು ದೆಹಲಿಗೆ ಹೋಗುತ್ತಿದ್ದೇನೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಭಾನುವಾರ ಬೆಳಿಗ್ಗೆ ದೆಹಲಿಗೆ ಹೊರಡುವ ಮೊದಲು ಸುದ್ದಿಗಾರ ಜೊತೆ ಯಡಿಯೂರಪ್ಪ ಮಾತನಾಡಿದರು.

‘ಸಂಪುಟ ವಿಸ್ತರಣೆ ಈ ವಾರ ಆಗುತ್ತದೆಯೇ’ ಎಂದು ಕೇಳಿದ ಪ್ರಶ್ನೆಗೆ, ‘ಗೊತ್ತಿಲ್ಲಪ್ಪ. ನಾನು ಎಲ್ಲ ವಿಷಯವನ್ನು ನಾಯಕರ ಜೊತೆ ಚರ್ಚೆ ಮಾಡುತ್ತೇನೆ’ ಎಂದರು.

ADVERTISEMENT

‘ಉಪ ಚುನಾವಣೆಗೆ ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಯಾರು ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಒಂದಷ್ಟು ಚರ್ಚೆ ಮಾಡುವುದು, ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪಡೆದ ಗೆಲುವಿನ ಬಗ್ಗೆ ಮಾಹಿತಿ ನೀಡುವಂಥದ್ದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಪಕ್ಷ ದ ಹಿರಿಯ ನಾಯಕರ ಜೊತೆ ಚರ್ಚಿಸಿ, ರಾತ್ರಿ ವಾಪಾಸು ಬರಲು ಹೋಗುತ್ತಿದ್ದೇನೆ’ ಎಂದೂ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.