ADVERTISEMENT

ಕೋವಿಡ್ ಸಂಬಂಧಿ ಯಾವುದೇ ಆದೇಶದ ಅಧಿಕಾರ ಮುಖ್ಯ ಕಾರ್ಯದರ್ಶಿಗೆ ಮಾತ್ರ: ಸಿಎಂ

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2021, 13:04 IST
Last Updated 29 ಮಾರ್ಚ್ 2021, 13:04 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ಕೋವಿಡ್ ನಿರ್ವಹಣೆ, ನಿಯಂತ್ರಣದ ವಿಚಾರದಲ್ಲಿ ಮುಖ್ಯ ಕಾರ್ಯದರ್ಶಿ ಮಾತ್ರ ಆದೇಶ, ಸುತ್ತೋಲೆಗಳನ್ನು ಹೊರಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಾಕೀತು ಮಾಡಿದ್ದಾರೆ.

ಸೋಮವಾರ ಈ ಸಂಬಂಧ ಆದೇಶ ಹೊರಡಿಸಿರುವ ಅವರು, 'ಮುಖ್ಯ ಕಾರ್ಯದರ್ಶಿ ಹೊರತಾಗಿ ಯಾವುದೇ ಸಚಿವರು ಅಥವಾ ಇಲಾಖೆಯ ಅಧಿಕಾರಿಗಳು ಆದೇಶ, ಸುತ್ತೋಲೆ ಹೊರಡಿಸುವಂತಿಲ್ಲ.

ಮುಖ್ಯ ಕಾರ್ಯದರ್ಶಿಯವರು ನನ್ನ ಅನುಮೋದನೆ ಪಡೆದ ಬಳಿಕವೇ ಆದೇಶ ಅಥವಾ ಸುತ್ತೋಲೆಗಳನ್ನು ಹೊರಡಿಸಬೇಕು' ಎಂದು ತಿಳಿಸಿದ್ದಾರೆ.

ADVERTISEMENT

ಕೋವಿಡ್ ಮಾರ್ಗಸೂಚಿ, ನಿಯಂತ್ರಣ ಕ್ರಮಗಳ ವಿಚಾರದಲ್ಲಿ ಗೊಂದಲ ಉಂಟಾಗುತ್ತಿರುವ ಕಾರಣದಿಂದ ಮುಖ್ಯಮಂತ್ರಿ ಈ ಕ್ರಮ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.