
ಪ್ರಜಾವಾಣಿ ವಾರ್ತೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ಬೆಳಿಗ್ಗೆ ಕೇರಳದ ತಿರುವನಂತಪುರದ ಅನಂತ ಪದ್ಮನಾಭ ಮತ್ತು ರಾಜರಾಜೇಶ್ವರಿ ದೇವಸ್ಥಾನಗಳಿಗೆ ಭೇಟಿ ನೀಡಲಿದ್ದಾರೆ.
ಗುರುವಾರದ ಸೂರ್ಯಗ್ರಹಣದಿಂದ ದೋಷ ಉಂಟಾಗುತ್ತದೆ ಎಂದು ಜ್ಯೋತಿಷಿಗಳ ಮಾತನ್ನು ನಂಬಿರುವ ಬಿಎಸ್ವೈ, ಅದರ ಪರಿಹಾರಕ್ಕಾಗಿ ಕೇರಳದ ದೇಗುಲಗಳಲ್ಲಿ ವಿಶೇಷ ಹೋಮ ಮತ್ತು ಪೂಜೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೂರ್ಯ ಗ್ರಹಣದಿಂದ ವೃಶ್ಚಿಕ ಮತ್ತು ಧನಸ್ಸು ರಾಶಿಯವರಿಗೆ ದೋಷ ಇದೆ ಎಂದು ಜ್ಯೋತಿಷಿಗಳು ಹೇಳಿದ್ದಾರೆ. ಯಡಿಯೂರಪ್ಪ ಅವರದು ವೃಶ್ಚಿಕ ರಾಶಿಯಾಗಿದ್ದು, ದೋಷ ಪರಿಹಾರಕ್ಕಾಗಿ ಕೇರಳದ ದೇಗುಲದ ಮೋರೆ ಹೋಗಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.