ADVERTISEMENT

ಸಿಎಂ ವಿಶೇಷ ವಿಮಾನದಲ್ಲಿ ದೆಹಲಿಗೆ ಕೊಂಡೊಯ್ದಿದ್ದು ಏನು: ಎಚ್‌ಡಿಕೆ ಪ್ರಶ್ನೆ

​ಪ್ರಜಾವಾಣಿ ವಾರ್ತೆ
Published 17 ಜುಲೈ 2021, 12:40 IST
Last Updated 17 ಜುಲೈ 2021, 12:40 IST
ಬಿ.ಎಸ್‌. ಯಡಿಯೂರಪ್ಪ ಮತ್ತು ಎಚ್‌.ಡಿ. ಕುಮಾರಸ್ವಾಮಿ
ಬಿ.ಎಸ್‌. ಯಡಿಯೂರಪ್ಪ ಮತ್ತು ಎಚ್‌.ಡಿ. ಕುಮಾರಸ್ವಾಮಿ    

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಶುಕ್ರವಾರ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್‌ಗಳಲ್ಲಿ ಕೊಂಡೊಯ್ಯಿದ್ದು ಏನು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಜೆಡಿಎಸ್‌ ಪ್ರಧಾನ ಕಚೇರಿ ಜೆ.ಪಿ. ಭವನದ ಬಳಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಯಡಿಯೂರಪ್ಪ ಅವರು ಶುಕ್ರವಾರ ವಿಶೇಷ ವಿಮಾನದಲ್ಲಿ ದೆಹಲಿಗೆ ಹೋಗುವಾಗ ಆರು ದೊಡ್ಡ ಬ್ಯಾಗ್‌ಗಳನ್ನು ಕೊಂಡೊಯ್ದಿದ್ದಾರೆ ಎಂಬ ಮಾಹಿತಿ ಇದೆ. ಆ ಚೀಲಗಳಲ್ಲಿ ರಾಜ್ಯದ ಸಮಸ್ಯೆಗಳಿಗೆ ಸಂಬಂಧಿಸಿದ ದಾಖಲಿಗಳಿದ್ದವೋ ಅಥವಾ ಬೇರೇನಾದರೂ ಇತ್ತೋ ಗೊತ್ತಿಲ್ಲ’ ಎಂದರು.

ಮುಖ್ಯಮಂತ್ರಿಯವರು ದೊಡ್ಡ ದೊಡ್ಡ ಉಡುಗೊರೆ ತೆಗೆದುಕೊಂಡು ಹೋಗಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಮಾಡುವಾಗ ಆರು ಬ್ಯಾಗ್‌ಗಳನ್ನು ಕೊಂಡೊಯ್ದಿದ್ದರೋ ಅಥವಾ ಹಾಗೆಯೇ ಹೋಗಿದ್ದರೋ ಎಂದು ಪ್ರಶ್ನಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.