ADVERTISEMENT

ಸಿಎಂ ಬದಲಾವಣೆ ವಿಚಾರ | ಬೆಂಗಳೂರಿಗೆ ಬಂದು ಕೇಳಿ: ಸತೀಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 17 ಜೂನ್ 2025, 10:38 IST
Last Updated 17 ಜೂನ್ 2025, 10:38 IST
<div class="paragraphs"><p>ಸತೀಶ ಜಾರಕಿಹೊಳಿ</p></div>

ಸತೀಶ ಜಾರಕಿಹೊಳಿ

   

ಹೊಸಪೇಟೆ (ವಿಜಯನಗರ): ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವನ್ನು ಇಲ್ಲಿ ಕುಳಿತು ಹೇಳೋಕಾಗಲ್ಲ, ಬೆಂಗಳೂರಿಗೆ ಬಂದು ಕೇಳಿ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಇಲ್ಲಿ ಮಂಗಳವಾರ ಮಾಧ್ಯಮದವರಿಗೆ ಈ ವಿಷಯ ತಿಳಿಸಿದ ಅವರು, 'ನಮ್ಮದೇ ಸಚಿವ ಸ್ಥಾನ ಉಳಿಸಿಕೊಳ್ಳೋದು ಕಷ್ಟ ಆಗಿದೆ, ಸಿಎಂ ಬದಲಾವಣೆ ಆಗ್ತಾರೆ ಅಂದ್ರೆ ನಾವೇನು ಹೇಳೋದು. ನೀವು ಬೆಂಗಳೂರಿಗೆ ಬಂದ್ರೆ ನಾನೇ ಸಿಎಂ ಅವರನ್ನ ಭೇಟಿ ಮಾಡಿಸ್ತೀನಿ, ಕೇಳಿ' ಎಂದರು.

ADVERTISEMENT

'ದಲಿತ ಸಚಿವರು‌_ಶಾಸಕರ ಸಭೆಯನ್ನ ಮುಂದೇನೂ ಮಾಡ್ತೀವಿ, ಅದಕ್ಕೂ ಸಿಎಂ ಬದಲಾವಣೆ ವಿಚಾರಕ್ಕೂ ಏನೂ ಸಂಬಂಧವಿಲ್ಲ' ಎಂದು ಸ್ಪಷ್ಟಪಡಿಸಿದರು.

'ಸಿಎಂ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮುಗಿದು ಹೋದ ಅಧ್ಯಾಯ. ಅದು ಬಂದಾಗ ನೋಡೋಣ' ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.