ಸಿದ್ದರಾಮಯ್ಯ
ಬೆಂಗಳೂರು: ‘ರಾಜ್ಯದಲ್ಲಿ ಒಳ್ಳೆಯ ಆಡಳಿತ ನೀಡುತ್ತಿದ್ದೇವೆ. ಹೀಗಾಗಿ, ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾಪದ ಅವಶ್ಯವೇ ಇಲ್ಲ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು.
‘ಡಿಸೆಂಬರ್ ವೇಳೆಗೆ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ’ ಎಂಬ ಶಾಸಕ ಬಸವರಾಜು ಶಿವಗಂಗಾ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಖಂಡ್ರೆ, ‘ಈ ವಿಷಯದ ಬಗ್ಗೆ ನಮ್ಮ ವರಿಷ್ಠರು ಈಗಾಗಲೇ ಮಾತನಾಡಿದ್ದಾರೆ. ತುಟಿಕ್ ಪಿಟಿಕ್ ಎನ್ನಬಾರದೆಂದು ಹೈಕಮಾಂಡ್ನವರು ಎಲ್ಲರಿಗೂ ತಾಕೀತು ಮಾಡಿದ್ದಾರೆ’ ಎಂದರು.
‘ಕೊಟ್ಟ ಮಾತಿನಂತೆ ನಾವು ಒಳ್ಳೆಯ ಆಡಳಿತ ಕೊಡುತ್ತಿದ್ದೇವೆ. ಹೀಗಾಗಿ ಬೇರೆ ವಿಚಾರಗಳು ಈಗ ಅಪ್ರಸ್ತುತ. ಬಸವರಾಜು ಶಿವಗಂಗಾ ಅವರು ನೀಡಿರುವ ಹೇಳಿಕೆ ಬಗ್ಗೆ ಹೈಕಮಾಂಡ್ನವರು ನೋಡಿಕೊಳ್ಳುತ್ತಾರೆ’ ಎಂದರು.
ನಮ್ಮ ಬೆಂಬಲವಿದೆ: ‘ಜಾತಿವಾರು ಸಮೀಕ್ಷೆಗೆ ನಮ್ಮ ಬೆಂಬಲವಿದೆ. ಲಿಂಗಾಯತರಲ್ಲಿ ನೂರು ಒಳಪಂಗಡಗಳಿದ್ದು, ಗೊಂದಲಗಳಿವೆ. ಸಾಮಾಜಿಕ, ಶೈಕ್ಷಣಿಕ ಮೀಸಲಾತಿಗಾಗಿ ಸಮೀಕ್ಷೆಯಲ್ಲಿ ತಮ್ಮ ತಮ್ಮ ಜಾತಿ ನಮೂದಿಸುತ್ತಾರೆ. ಗೊಂದಲಗಳನ್ನು ಮಠಾಧೀಶರು ಸರಿ ಮಾಡಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.