ADVERTISEMENT

ಫಲಿತಾಂಶ ಅನಿರೀಕ್ಷಿತ, ಜನಾದೇಶ ಪಡೆದ ಮೋದಿಗೆ ಅಭಿನಂದನೆ: ಸಿಎಂ ಎಚ್ಡಿಕೆ ಟ್ವೀಟ್‌

​ಪ್ರಜಾವಾಣಿ ವಾರ್ತೆ
Published 23 ಮೇ 2019, 12:14 IST
Last Updated 23 ಮೇ 2019, 12:14 IST
   

ಬೆಂಗಳೂರು: ಲೋಕಸಭೆ ಚುನಾವಾಣೆ ಫಲಿತಾಂಶವನ್ನು ಅನಿರೀಕ್ಷಿತ ಎಂದಿರುವ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ, ಮತ್ತೊಮ್ಮೆ ಜನಾದೇಶ ಪಡೆದ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಚುನಾವಣೆ ಸೋಲಿನ ಬಳಿಕ ಅವರು ಟ್ವೀಟ್‌ ಮಾಡಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?

ADVERTISEMENT

ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ. ಈ ಫಲಿತಾಂಶವನ್ನು ಗೌರವಿಸುತ್ತೇನೆ ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ.

ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ.

ಚುನಾವಣೆಯ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು ಎಂದು ಕುಮಾರಸ್ವಾಮಿ ಅವರು ಟ್ವೀಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.