ADVERTISEMENT

‘ಉ.ಕ ಎಂದರೆ ಸಿ.ಎಂ ಉರಿದು ಬೀಳ್ತಾರೆ’

​ಪ್ರಜಾವಾಣಿ ವಾರ್ತೆ
Published 27 ಜೂನ್ 2019, 19:30 IST
Last Updated 27 ಜೂನ್ 2019, 19:30 IST
   

ವಿಜಯಪುರ: ಉತ್ತರ ಕರ್ನಾಟಕ ಭಾಗದವರನ್ನು ನೋಡಿದರೆ ಉರಿದು ಬೀಳುವ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ತಮ್ಮ ತಂದೆ ಹಾಗೂ ಮಗನ ಸೋಲನ್ನು ಉತ್ತರ ಕರ್ನಾಟಕದ ಜನತೆ ಮೇಲೆ ಹಾಕುತ್ತಿದ್ದಾರೆ ಎಂದು ಶಾಸಕ ಬಿ.ಶ್ರೀರಾಮುಲು ದೂರಿದರು.

‘ವೋಟ್ ಮಾಡೋಕೆ ಮೋದಿ ಬೇಕು, ಕೆಲಸ ಮಾಡೋಕೆ ನಾನು ಬೇಕಾ?’ ಎಂಬ ಕುಮಾರಸ್ವಾಮಿ ಹೇಳಿಕೆಗೆ ಗುರುವಾರ ಪ್ರತಿಕ್ರಿಯಿಸಿದ ಅವರು, ‘ಕಾವೇರಿ ಹೋರಾಟಕ್ಕೆ ಸ್ಪಂದಿಸುವ ಮುಖ್ಯಮಂತ್ರಿ, ಉತ್ತರ ಕರ್ನಾಟಕ ಭಾಗದ ಕೃಷ್ಣಾ, ತುಂಗಭದ್ರಾ, ಘಟಪ್ರಭಾ ಹೋರಾಟಗಳಿಗೆ ಏಕೆ ಸ್ಪಂದಿಸುವುದಿಲ್ಲ’ ಎಂದು ಪ್ರಶ್ನಿಸಿದರು.

‘ಮಧ್ಯಂತರ ಚುನಾವಣೆಗೆ ಕಾಂಗ್ರೆಸ್– ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ನಾಟಕ. ಸಿದ್ದರಾಮಯ್ಯ ವರ್ಚಸ್ಸು ಕಳೆದುಕೊಂಡಿದ್ದಾರೆ. ತವರು ಜಿಲ್ಲೆಯಲ್ಲೇ ಅವರಿಗೆ ವರ್ಚಸ್ಸಿಲ್ಲ. ಸಿದ್ದು ಅಂತ್ಯಕಾಲ ಆರಂಭವಾಗಿದೆ. ರೋಷನ್ ಬೇಗ್ ಅವರಂತಹ ಹಿರಿಯ ನಾಯಕರನ್ನು ಪಕ್ಷದಿಂದ ಅಮಾನತು ಮಾಡಿರುವುದು ಸಿದ್ದರಾಮಯ್ಯ ಹಟಕ್ಕೆ ಸಾಕ್ಷಿಯಾಗಿದೆ’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.