ADVERTISEMENT

‘ಕರ್ನಾಟಕ ಮುನ್ನಡೆ’ ನಾಳೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2019, 18:43 IST
Last Updated 2 ಮಾರ್ಚ್ 2019, 18:43 IST
   

ಬೆಂಗಳೂರು: ವಿವಿಧ ಕ್ಷೇತ್ರಗಳ ತಜ್ಞರ ಜೊತೆ ಸೋಮವಾರ (ಮಾರ್ಚ್‌ 4) ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ‘ಕರ್ನಾಟಕ ಮುನ್ನಡೆ’ ಹೆಸರಿನ ಕಾರ್ಯಕ್ರಮದಲ್ಲಿ ಸಂವಾದ ನಡೆಸಲಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್‌ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ. ಮುಖ್ಯಮಂತ್ರಿಯಾಗಿ ಆಡಳಿತ ಚುಕ್ಕಾಣಿ ಹಿಡಿದ ಬಳಿಕ ತನ್ನ ಜನಪರ, ಅಭಿವೃದ್ಧಿಪರ ಕಾರ್ಯಕ್ರಮ, ಯೋಜನೆಗಳ ಕುರಿತು ಮನದಾಳವನ್ನು ಮುಖ್ಯಮಂತ್ರಿ ಹಂಚಿಕೊಳ್ಳಲಿದ್ದಾರೆ ಎಂದು ಮುಖ್ಯಮಂತ್ರಿ ಸಚಿವಾಲಯದ ಮೂಲಗಳು ತಿಳಿಸಿವೆ

ವಿಜ್ಞಾನ, ತಂತ್ರಜ್ಞಾನ, ಕೃಷಿ, ಕೈಗಾರಿಕೆ, ಸಾಹಿತ್ಯ, ಮಾಧ್ಯಮ ಹೀಗೆ ಬೇರೆ ಬೇರೆ ಕ್ಷೇತ್ರಗಳಿಂದ ತಲಾ ಐವರು ಪರಿಣತರಿಗೆ ಈ ಕಾರ್ಯಕ್ರಮದ ಆಹ್ವಾನ ನೀಡಲಾಗಿದೆ. ಸುಮಾರು 100 ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ತಜ್ಞರ ಸಲಹೆಗಳನ್ನು ಮುಖ್ಯಮಂತ್ರಿ ಸ್ವೀಕರಿಸಲಿದ್ದಾರೆ ಎಂದೂ ಮೂಲಗಳು ಹೇಳಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.