ADVERTISEMENT

‘ಜೈ ಸಿಡಿ ರಾಮ್‌’ ಎಂದ ಇಬ್ರಾಹಿಂ: ಬಿಜೆಪಿ ಖಂಡನೆ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2021, 20:34 IST
Last Updated 24 ಮಾರ್ಚ್ 2021, 20:34 IST
ಸಿ.ಎಂ.ಇಬ್ರಾಹಿಂ
ಸಿ.ಎಂ.ಇಬ್ರಾಹಿಂ   

ಬೆಂಗಳೂರು: ಕಾಂಗ್ರೆಸ್‌ ನಾಯಕ ಸಿ.ಎಂ.ಇಬ್ರಾಹಿಂ ಅವರು ‘ಜೈ ಸಿಡಿ ರಾಮ್’ ಎಂಬ ಪದ ಬಳಕೆ ಮಾಡಿರುವುದನ್ನು ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಖಂಡಿಸಿದ್ದಾರೆ.

‘ಬಿಜೆಪಿಯವರು ಜೈಶ್ರೀರಾಮ್‌ ಎನ್ನುತ್ತಿದ್ದರು. ಇನ್ನು ಮುಂದೆ ಜೈ ಸಿಡಿ ರಾಮ್ ಅನ್ನಬೇಕು' ಎಂದು ಎಂದು ವ್ಯಂಗ್ಯವಾಡಿ ಉದ್ಧಟತನ ಪ್ರದರ್ಶಿಸಿದ್ದಾರೆ ಎಂದು ಹೇಳಿದ್ದಾರೆ.

‘ಇಬ್ರಾಹಿಂ ಅವರು ಶ್ರೀರಾಮನ ಹೆಸರು ಪ್ರಸ್ತಾಪಿಸಿ ಅಪಮಾನ ಮಾಡಿದ್ದಾರೆ. ಇದರಿಂದ ಅಸಂಖ್ಯಾತ ಹಿಂದುಗಳ ಮನಸ್ಸಿಗೆ ನೋವುಂಟು ಮಾಡಿದ್ದಾರೆ. ತಕ್ಷಣವೇ ಇಬ್ರಾಹಿಂ ಅವರು ಕ್ಷಮೆ ಕೇಳಬೇಕು. ಇಲ್ಲವಾದರೆ ಅವರ ವಿರುದ್ಧ ಸರ್ಕಾರ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.