ಹರಿಹರ: ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅಲ್ಪಸಂಖ್ಯಾತರ ಪ್ರಾಬಲ್ಯವಿರುವ ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಿದರೆ ಅಭೂತಪೂರ್ವ ಜಯಗಳಿಸುತ್ತಾರೆ. ಕಾಂಗ್ರೆಸ್ ದೂಳಿಪಟವಾಗುವುದಲ್ಲದೇ ಜಿಲ್ಲೆಯ 5 ಸ್ಥಾನಗಳೂ ಜೆಡಿಎಸ್ಗೆ ದೊರಕುತ್ತವೆ. ಹರಿಹರ ಕ್ಷೇತ್ರದಲ್ಲಿ ನನ್ನ ಗೆಲುವೂ ಸುಲಭವಾಗುತ್ತದೆ. ಆದ್ದರಿಂದ ಸಿ.ಎಂ. ಇಬ್ರಾಹಿಂ ಮತ್ತು ಎಚ್.ಡಿ. ಕುಮಾರಸ್ವಾಮಿ ಇದನ್ನು ಘೋಷಣೆ ಮಾಡಬೇಕು’ ಎಂದು ಹರಿಹರ ಮಾಜಿ ಶಾಸಕಎಚ್.ಎಸ್. ಶಿವಶಂಕರ್ ಮನವಿ ಮಾಡಿದರು.
ಪಕ್ಷದ ಜನತಾ ಜಲಧಾರೆ ರಥಯಾತ್ರೆಯ ಅಂಗವಾಗಿ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾವೇಶದಲ್ಲಿ ಅವರು ಈ ರೀತಿಯ ಸಲಹೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.