ADVERTISEMENT

ಜೆಡಿಎಸ್‌ ಪಕ್ಷದಿಂದ ಸಿ.ಎಂ ಇಬ್ರಾಹಿಂ ಅಮಾನತು

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2023, 13:08 IST
Last Updated 17 ನವೆಂಬರ್ 2023, 13:08 IST
<div class="paragraphs"><p>ಸಿ.ಎಂ.ಇಬ್ರಾಹಿಂ</p></div>

ಸಿ.ಎಂ.ಇಬ್ರಾಹಿಂ

   

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಸಿ.ಎಂ.ಇಬ್ರಾಹಿಂ ಅವರನ್ನು ಕೂಡಲೇ ಜಾರಿಗೆ ಬರುವಂತೆ ಜಾತ್ಯತೀತ ಜನತಾದಳ ಪಕ್ಷದಿಂದ ಅಮಾನತು ಮಾಡಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡ ಅವರು ಆದೇಶ ಹೊರಡಿಸಿದ್ದಾರೆ.

ಸಿ.ಎಂ. ಇಬ್ರಾಹಿಂರವರು ಸಾರ್ವಜನಿಕವಾಗಿ ಪಕ್ಷದ ರಾಷ್ಟ್ರಧ್ಯಕ್ಷರ, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಹಾಗೂ ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಹೊಂದಾಣಿಕೆ ಬಗ್ಗೆ, ಪಕ್ಷದ ರಾಜ್ಯ ಪರಿಷತ್, ಶಾಸಕಾಂಗ ಪಕ್ಷದ ಸಭೆ, ಕೋಡ್ ಸಮಿತಿ ಮುಂತಾದ ಸಭೆಗಳಲ್ಲಿ ಒಮ್ಮತದ ನಿರ್ಣಯವಾಗಿದ್ದರೂ ಸಹ ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡಿ, ಪಕ್ಷದ ಹಿತಕ್ಕೆ ಧಕ್ಕೆ ತಂದಿರುತ್ತಾರೆ. ಇಂತಹ ನಡವಳಿಕೆ ಮತ್ತು ಹೇಳಿಕೆಗಳು ಪಕ್ಷದ ವಿರೋಧಿ ಚಟುವಟಿಕೆಗಳಾಗಿರುತ್ತವೆ ಎಂದು ಆದೇಶದಲ್ಲಿ ಹೇಳಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.