ADVERTISEMENT

ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 19:04 IST
Last Updated 16 ಜನವರಿ 2026, 19:04 IST
<div class="paragraphs"><p>ಸಿದ್ದರಾಮಯ್ಯ&nbsp;ಹಾಗೂ ಭೀಮಣ್ಣ ಖಂಡ್ರೆ</p></div>

ಸಿದ್ದರಾಮಯ್ಯ ಹಾಗೂ ಭೀಮಣ್ಣ ಖಂಡ್ರೆ

   

ಬೀದರ್: ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ದುಃಖ ವ್ಯಕ್ತಪಡಿಸಿದ್ದಾರೆ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ ಎಂದು ಹೇಳಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವರು ಬರೆದುಕೊಂಡಿದ್ದಾರೆ.

ADVERTISEMENT

'ಮಾಜಿ‌ ಸಚಿವರು, ನಾಡಿನ ಹಿರಿಯ ರಾಜಕಾರಣಿಗಳು ಆದ ಭೀಮಣ್ಣ ಖಂಡ್ರೆಯವರ ನಿಧನದಿಂದ ದುಃಖಿತನಾಗಿದ್ದೇನೆ. ಶರಣ ಚಿಂತನೆಗಳ ನೆರಳಂತೆ ಬಾಳಿದ ಧೀಮಂತ ನಾಯಕನ ನಿಧನದಿಂದ ನಾಡಿಗೆ ತುಂಬಲಾರದ ನಷ್ಟವಾಗಿದೆ' ಎಂದಿದ್ದಾರೆ.

'ಮಹಾತ್ಮಗಾಂಧಿಯವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದ ಭೀಮಣ್ಣ ಖಂಡ್ರೆಯವರು ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡವರು. ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು, ಆ ಪ್ರಯತ್ನದಲ್ಲಿ ಕೂಡ ಸಫಲರಾದ ಹುಟ್ಟು ಹೋರಾಟಗಾರ. ಭೀಮಣ್ಣ ಖಂಡ್ರೆಯವರ ಬದುಕಿನ ಹೆಜ್ಜೆಗಳು ಈ ಮಣ್ಣಿನಲ್ಲಿ ಚಿರಸ್ಥಾಯಿ' ಎಂದು ಬರೆದುಕೊಂಡಿದ್ದಾರೆ.

'ಬದುಕು ಕೊಟ್ಟ ಎಲ್ಲಾ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜಕ್ಕಾಗಿ ದುಡಿದ ಸಾರ್ಥಕ ಜೀವಕ್ಕೆ ಅಂತಿಮ ನಮನಗಳು. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರು ಹಾಗೂ ಅಪಾರ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ‌ ಎಂದು ಪ್ರಾರ್ಥಿಸುತ್ತೇನೆ' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.