ADVERTISEMENT

ನೀತಿ ಸಂಹಿತೆ ಸಡಿಲಿಕೆ: ಸಂಜೀವ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 3 ಮೇ 2019, 20:09 IST
Last Updated 3 ಮೇ 2019, 20:09 IST
ಸಂಜೀವ್‌ಕುಮಾರ್
ಸಂಜೀವ್‌ಕುಮಾರ್   

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಸಡಿಲಗೊಳಿಸಬೇಕು ಎಂಬ ಪ್ರಸ್ತಾವಕ್ಕೆ ಅನುಮೋದನೆ ನೀಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್‌ಕುಮಾರ್ ತಿಳಿಸಿದರು.

ಮೂಲಸೌಕರ್ಯ, ಅಭಿವೃದ್ಧಿ ಕಾಮಗಾರಿ, ಸರಕು ಮತ್ತು ಸೇವೆ ಸಂಗ್ರಹಣೆಗೆ ಸಂಬಂಧಿಸಿದಂತೆ ಟೆಂಡರ್‌ಗಳನ್ನು ಅಂತಿಮಗೊಳಿಸಬಹುದು. ಇಲಾಖೆಗಳು, ನಿಗಮ– ಮಂಡಳಿಗಳು, ಸ್ಥಳೀಯ ಸಂಸ್ಥೆಗಳು ಮತ್ತು ಶಾಸನ ಬದ್ಧ ಸಂಸ್ಥೆಗಳಲ್ಲಿನ ನೇಮಕಾತಿ ಪ್ರಕ್ರಿಯೆಗಳನ್ನು ಮುಂದುವರಿಸಬಹುದು. ಅದೇ ರೀತಿ ವರ್ಗಾವಣೆ ಮತ್ತು ಸ್ಥಳ ನಿಯೋಜನೆ ಪ್ರಕ್ರಿಯೆಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT