ಬೆಂಗಳೂರು:ಸಿದ್ದಾರ್ಥ ನಾಪತ್ತೆ ಪ್ರಕರಣ ಒಂದು ದುರಂತ, ಅವರು ಧೃತಿಗೆಡಬಾರದಿತ್ತು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮಂಗಳವಾರ ಹೇಳಿದ್ದಾರೆ.
ಇಲ್ಲಿನಜೆ.ಪಿ.ಭವನದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು,ನನಗೂ ಅವರಿಗೂ 35 ವರ್ಷಗಳಿಂದ ಪರಿಚಯ ಇತ್ತು, ಸಿದ್ದಾರ್ಥ ತುಂಬಾ ಒಳ್ಳೆಯ ಹುಡುಗನಾಗಿದ್ದು ಅವರಿಗೆ ಸಾಕಷ್ಟು ಆಸ್ತಿಯೂ ಇತ್ತು ೆಂದು ಹೇಳಿದರು. ಎಸ್.ಎಂ.ಕೃಷ್ಣ ನನಗಿಂತ ಒಂದು ವರ್ಷ ಹಿರಿಯರು. ಈಗ ಅವರು ಇದನ್ನು ಸಹಿಸಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಅವರನ್ನು ಭೇಟಿ ಮಾಡಿ ಧೈರ್ಯ ಹೇಳಿ ಬಂದಿದ್ದೇನೆ ಎಂದು ದೇವೇಗೌಡ ಹೇಳಿದರು.
ಐಟಿ ಅಧಿಕಾರಿಗಳು ತೊಂದರೆ ಕೊಟ್ಟಿದ್ದರು ಎಂಬ ಸಿದ್ಧಾರ್ಥ ಪತ್ರದ ಬಗ್ಗೆ ಮಾತನಾಡಿದ ಅವರುಐಟಿ ದಾಳಿ ಆಗುತ್ತಿರುವ ರೀತಿಯ ಬಗ್ಗೆ ಎಲ್ಲರಿಗೂ ಗೊತ್ತಿದೆ. ನೀವೇ ಇದನ್ನು ವಿಶ್ಲೇಷಣೆ ಮಾಡಿ. ಈ ರಾಜಕಾರಣದ ಬಗ್ಗೆ ಮಾತನಾಡಲ್ಲ ಎಂದು ಅವರು ಹೇಳಿದರು.
ಸಿದ್ಧಾರ್ಥ ತುಂಬಾ ಮುಂದೆ ಹೋಗ್ತಾ ಇದ್ರು, ಉದಯೋನ್ಮುಖ ಉದ್ಯಮಿಯಾಗಿದ್ದರು. ಷೇರು ಕುಸಿದು ಏನು ತೊಂದರೆ ಆಯ್ತೋ ಗೊತ್ತಿಲ್ಲ ಎಂದರು.ಸಿದ್ದಾರ್ಥ ಹೆದರಿಕೊಳ್ಳುವ ಅವಶ್ಯಕತೆ ಇರಲಿಲ್ಲ. ಯಾಕೆ ಆ ಕೆಟ್ಟ ಗಳಿಗೆ ಬಂತೊ ಗೊತ್ತಿಲ್ಲ ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.