ADVERTISEMENT

ಪಿಎಸ್‌ಐ ನೇಮಕಾತಿ ಅಕ್ರಮ| ದಾಖಲೆಗಳೊಂದಿಗೆ ಬನ್ನಿ: ಪ್ರಿಯಾಂಕ್‌ಗೆ ಸಿಐಡಿ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2022, 5:33 IST
Last Updated 25 ಏಪ್ರಿಲ್ 2022, 5:33 IST
ಪ್ರಿಯಾಂಕ್‌ ಖರ್ಗೆ
ಪ್ರಿಯಾಂಕ್‌ ಖರ್ಗೆ    

ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆ ಅವರಿಗೆ ನೋಟಿಸ್‌ ನೀಡಿದ್ದಾರೆ.

ಈ ಬಗ್ಗೆ ಖಚಿತಪಡಿಸಿರುವ ಅವರು, ‘ಸಿಐಡಿಯವರು ಬೆಂಗಳೂರು ನಿವಾಸಕ್ಕೆ ನೋಟಿಸ್‌ ಕಳುಹಿಸಿದ್ದಾರೆ. ವಿಚಾರಣೆಗೆ ಹಾಜರಾಗುವ ಬಗ್ಗೆ ತೀರ್ಮಾನಿಸಿಲ್ಲ. ಪಕ್ಷದ ನಾಯಕರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ’ ಎಂದರು.

545 ಪಿಎಸ್‌ಐ ಹುದ್ದೆಗಳ ನೇಮಕಾತಿ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಮಧ್ಯೆಯೇ, ಶೀಘ್ರದಲ್ಲಿಯೇ ನಡೆಯಲಿದ್ದ 402 ಪಿಎಸ್‌ಐ ನೇಮಕಾತಿಗೆ ಸಂಬಂಧಿಸಿ ಇಬ್ಬರು ಮಾತನಾಡಿದ್ದ ಆಡಿಯೊವನ್ನು ಪ್ರಿಯಾಂಕ್‌ ಕಲಬುರಗಿಯಲ್ಲಿ ಶನಿವಾರ ಬಿಡುಗಡೆ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.