ADVERTISEMENT

ರಾಜಕೀಯ ಹಿಂದುಳಿದಿರುವಿಕೆ ಗುರುತಿಸಲು ಆಯೋಗ: ಜೆ.ಸಿ. ಮಾಧುಸ್ವಾಮಿ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2022, 8:41 IST
Last Updated 31 ಮಾರ್ಚ್ 2022, 8:41 IST
ಕಾನೂನು ಮತ್ತು ಸಂಸದೀಯ ಜೆ.ಸಿ.ಮಾಧುಸ್ವಾಮಿ
ಕಾನೂನು ಮತ್ತು ಸಂಸದೀಯ ಜೆ.ಸಿ.ಮಾಧುಸ್ವಾಮಿ   

ಬೆಂಗಳೂರು: ರಾಜಕೀಯ ಹಿಂದುಳಿದಿರುವಿಕೆ ಗುರುತಿಸಲು ಆಯೋಗ ರಚಿಸಲು ತೀರ್ಮಾನಿಸಿರುವುದಾಗಿ ಕಾನೂನು ಮತ್ತು ಸಂಸದೀಯ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ನೀಡುವ ಸಂಬಂಧ ಗುರುವಾರ ನಡೆದ ಸರ್ವ ಪಕ್ಷಗಳ ಸಭೆಯ ಬಳಿಕ ಅವರು ಸುದ್ದಿಗಾರರಿಗೆ ಈ ಮಾಹಿತಿ ನೀಡಿದರು.

ರಾಜಕೀಯವಾಗಿ ಹಿಂದುಳಿದಿರುವಿಕೆ ಗುರುತಿಸಲು ನಿಖರ ಮಾಹಿತಿ ಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು. ಆದ್ದರಿಂದ ಆಯೋಗ ರಚಿಸಿ ಕಾಲ ಮಿತಿಯಲ್ಲಿ ಮಾಹಿತಿ ಸಂಗ್ರಹಿಸಿ, ವರದಿ ಪಡೆದು ಬಳಿಕಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.