ADVERTISEMENT

ಕೋಮು ದ್ವೇಷ ಭಾಷಣ: ಸಚಿವ ಮುನಿರತ್ನ ವಿರುದ್ಧ ಎಫ್‌ಐಆರ್‌

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2023, 21:27 IST
Last Updated 5 ಏಪ್ರಿಲ್ 2023, 21:27 IST
ಮುನಿರತ್ನ
ಮುನಿರತ್ನ   

ಬೆಂಗಳೂರು: ಕೋಮು ದ್ವೇಷ ಭಾಷಣ ಹಾಗೂ ಕೋಮು ಗಲಭೆಗೆ ಪ್ರಚೋದನೆ ಆರೋಪದ ಮೇರೆಗೆ ತೋಟಗಾರಿಕೆ ಸಚಿವ ಮುನಿರತ್ನ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್‌ ಠಾಣೆಯಲ್ಲಿ ಬುಧವಾರ ಎಫ್‌ಐಆರ್ ದಾಖಲಾಗಿದೆ.

‘ಅಲ್ಪಸಂಖ್ಯಾತ ಕ್ರೈಸ್ತ ಸಮುದಾಯದವರನ್ನು ಹೊಡೆದು ಓಡಿಸಿ’ ಎಂದು ಕೋಮು ದ್ವೇಷದ ಹೇಳಿಕೆ ನೀಡಿ ಆ ಸಮುದಾಯದ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಅಧಿಕಾರಿ ಮನೋಜ್‌ಕುಮಾರ್ ದೂರು ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT