ADVERTISEMENT

ದಿನೇಶ್‌ ಗುಂಡೂರಾವ್‌ ವಿರುದ್ಧ ಬಿಜೆಪಿ ದೂರು

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2019, 19:56 IST
Last Updated 2 ಡಿಸೆಂಬರ್ 2019, 19:56 IST

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರು ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದಸಿಂಗ್‌ ವಿರುದ್ಧ ಅಸಂಸದೀಯ ಪದಗಳಿಂದ ನಿಂದಿಸಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

‘ಚುನಾವಣಾ ಪ್ರಚಾರ ಮಾಡುವ ಸಂದರ್ಭದಲ್ಲಿ ಯಾವುದೇ ಆಧಾರವಿಲ್ಲದೆ, ನಮಕ್‌ ಹರಾಮ್‌, ದಗೇಬಾಜೆ ಎಂದು ನಿಂದಿಸಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ’ ಎಂದು ದೂರಿನಲ್ಲಿ ಹೇಳಿದೆ.

ಅಲ್ಲದೆ, ‘ಕರ್ನಾಟಕ ಕಾಂಗ್ರೆಸ್‌’ ಫೇಸ್‌ಬುಕ್‌ ಪೇಜ್‌ನಲ್ಲಿ ‘ಅನರ್ಹ’ ಶೀರ್ಷಿಕೆ ಹಾಕಿ ಬಿಜೆಪಿಯ 15 ಅಭ್ಯರ್ಥಿಗಳ ಚಿತ್ರಗಳನ್ನು ಪ್ರಕಟಿಸಿದ್ದಾರೆ. ಇದು ಅಭ್ಯರ್ಥಿಗಳ ವ್ಯಕ್ತಿತ್ವಕ್ಕೆ ಕುಂದುಂಟು ಮಾಡುತ್ತದೆ. ಇದರಿಂದ ಕ್ಷೇತ್ರದ ಜನರಿಗೂ ಮುಜುಗರ ಆಗುತ್ತದೆ. ಆದ್ದರಿಂದ ಅಡ್ಮಿನ್‌ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.